ಮಂಡ್ಯದಲ್ಲಿ ಮುಂದುವರೆದ ಸುಮಲತಾ v/s ಜೆಡಿಎಸ್ ಸಮರ, ಗುದ್ದಲಿ ಪೂಜೆ ಮಾಡದೆ ವಾಪಸ್!

By Ramesh BFirst Published Mar 9, 2022, 4:27 PM IST
Highlights

* ಮಂಡ್ಯದಲ್ಲಿ ಮುಂದುವರೆದ ಸುಮಲತಾ v/s ಜೆಡಿಎಸ್ ಸಮರ
* ನಿಗದಿಯಾಗಿದ್ದ ಗುದ್ದಲಿ ಪೂಜೆ ನೆರವೇರಿಸದೆ ವಾಪಸ್‌ ಆದ ಸಂಸದೆ
* ಜೆಡಿಎಸ್ ಶಾಸಕ ಸಾರಾ.ಮಹೇಶ್ ಪ್ರತಿನಿದಿಸುವ ಕ್ಷೇತ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲು ತೆರಳಿದ್ದ ಸುಮಲತಾ

ಮೈಸೂರು, (ಮಾ.09): ಮಂಡ್ಯ ಜಿಲ್ಲೆಯಲ್ಲಿ(Mandya District) ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕ (JDS Leaders)ಸಮರ ಮುಂದುವರೆದಿದೆ. ಸರಿಯಾದ ವ್ಯವಸ್ಥೆ ಮಾಡದ ಹಿನ್ನೆಲೆ ನಾಲೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡದೆ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ(Sumalatha Ambareesh) ವಾಪಸ್ ಆಗಿದ್ದಾರೆ. ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚೌಕಹಳ್ಳಿ ಗ್ರಾಮದಲ್ಲಿ ಇಂದು(ಬುಧವಾರ) ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪೂಜೆಗೆ ಸಂಸದೆ ಸುಮಲತಾ ಕೂಡ ಬಂದಿದ್ದರು. ಆದ್ರೆ ಸರಿಯಾಗಿ ಶಾಮಿಯಾನ, ಚೇರ್ ವ್ಯವಸ್ಥೆ ಮಾಡದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮ ಸ್ಥಳದಲ್ಲಿ ಸರಿಯಾಗಿ ಯಾವುದೇ ವ್ಯವಸ್ಥೆ ಮಾಡದಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಂಸದೆ ಸುಮಲತಾ ಕೆಂಡಾಮಂಡಲರಾಗಿದ್ದಾರೆ. ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ಪ್ರತಿನಿಧಿಸುವ K.R.ನಗರ ಕ್ಷೇತ್ರದ ಕಾರ್ಯಕ್ರಮದಲ್ಲೇ ಇಂತಹ ವ್ಯವಸ್ಥೆ ಕಂಡು ನಿಗದಿಯಾಗಿದ್ದ ಗುದ್ದಲಿ ಪೂಜೆ ನೆರವೇರಿಸದೆ ಸುಮಲತಾ ವಾಪಸ್ ಆಗಿದ್ದಾರೆ.

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಮರಳುತ್ತಾರಾ? ಅವರೇ ಕೊಟ್ರು ಸ್ಪಷ್ಟನೆ

ಕೇಂದ್ರ ಸರ್ಕಾರದ ಸಂಸದರ ನಿಧಿಯಿಂದ ನಾಲಾ ದುರಸ್ತಿ ಕಾಮಗಾರಿ ಕಾರ್ಯ ಕೈಗೊಳ್ಳಲಾಗಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಸರಿಯಾದ ವ್ಯವಸ್ಥೆ ಮಾಡದಿದ್ದದಕ್ಕೆ ಕಾರ್ಯಪಾಲಕ ಅಭಿಯಂತರ ಬಿ.ಜೆ.ಈರಣ್ಣ, ಎಇಇ ಗುರುರಾಜ್ ಹಾಗೂ ಇಂಜಿನಿಯರ್ ಅಭಿಲಾಷ್‌ಗೆ ಸಂಸದೆ ಸುಮಲತಾ ತೀವ್ರ ತರಾಟೆಗೆ ತಗೊಂಡಿದ್ದಾರೆ. 

ಕುಶಾಲನಗರ ವೃತ್ತ ಅಧೀಕ್ಷಕ ಇಂಜಿನಿಯರ್ ಚನ್ನಕೇಶವಗೆ ಕರೆ ಮಾಡಿ ಸಂಸದರಿಗೆ ಅಗೌರ ತೋರಿಸುತ್ತಿದ್ದೀರಿ, ಶಿಸ್ತುಬದ್ಧ ವ್ಯವಸ್ಥೆ ಮಾಡಿಲ್ಲ. ಸಂಸದರ ಕಾರ್ಯಕ್ರಮಕ್ಕೆ ಪ್ರತಿ ಬಾರಿಯೂ ಹೀಗೆ ಮಾಡುತ್ತಿದ್ದೀರಿ. ನಿಮ್ಮ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ದೂರು ನೀಡುವೆ. ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸುವೆ ಎಂದು ಸಂಸದೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ
ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ  ಎಂದು ಪರೋಕ್ಷವಾಗಿ ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ

ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಎಂದ ಹೇಳಿದ್ರೆ ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಅವರಿಗೆ ಎಂದು ಎಂದರು.

click me!