
ಬೆಂಗಳೂರು, ಜುಲೈ.22): ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
"
ಸುಮಲತಾ ಅವರಿಗೆ ಜು.6ರಂದು ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಅದಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆದಿದ್ದರು. ಇದೀಗ ಮೂರು ವಾರಗಳ ಬಳಿಕ ಕೊರೋನಾದಿಂದ ಗುಣಮುಖರಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ಗೂ ತಗುಲಿದ ಕೊರೋನಾ ವೈರಸ್
ಸುಮಲತಾ ಸಂತಸ ಹಂಚಿಕೊಂಡಿದ್ದು ಹೀಗೆ
ಇಂದು (ಬುಧವಾರ) ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಅವರು, ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿದ್ದೇನೆ. ಇದೀಗ ನನ್ನ ಕೊವಿಡ್-19 ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಸೋಂಕಿನಿಂದ ಸಂಪೂರ್ಣ ಮುಕ್ತಳಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನೂ ನಾಲ್ಕು ವಾರಗಳ ವಿಶ್ರಾಂತಿ ಪಡೆದು, ಮತ್ತೆ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತೇನೆ. ಜನರ ಸೇವೆ ಮಾಡಲು ಕಾತರಳಾಗಿದ್ದೇನೆ ಎಂದು ಬರೆದಿದ್ದಾರೆ
ದೇಹಕ್ಕೆ ಚೈತನ್ಯ ತುಂಬಲು ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ನನ್ನ ಆರೋಗ್ಯಕ್ಕಾಗಿ ನೀವೆಲ್ಲ ಪ್ರಾರ್ಥಿಸಿದ್ದೀರಿ. ಶೀಘ್ರವೇ ಗುಣಮುಖರಾಗಿ ಎಂದು ಶುಭ ಹಾರೈಸಿದ್ದೀರಿ. ದೇವರ ಅನುಗ್ರಹದ ಜತೆಗೆ ವೈದ್ಯರಾದ ಡಾ. ಸತೀಶ್ ಅವರು ನೀಡಿದ ಚಿಕಿತ್ಸೆ ಮತ್ತು ಸಲಹೆ ನನ್ನಲ್ಲಿ ಸಾಕಷ್ಟು ಧೈರ್ಯ ತುಂಬಿದೆ. ಕೊರೋನಾ ಗೆದ್ದು ಬರಲು ಸಹಾರಿಯಾದವು ಎಂದು ಸುಮಲತಾ ಫೇಸ್ಬುಕ್ ಮತ್ತು ಟ್ವಿಟ್ಟರ್ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.