ಕರ್ನಾಟಕದ ಮತ್ತೋರ್ವ ಕಾಂಗ್ರೆಸ್ ನಾಯಕನಿಗೆ ಕೊರೋನಾ: ಬೆಂಬಲಿಗರಿಗೆ ಆತಂಕ

By Suvarna NewsFirst Published Jul 17, 2020, 3:17 PM IST
Highlights

ರಾಜ್ಯ ರಾಜಕೀಯ ನಾಯಕರನ್ನು ಮಹಾಮಾರಿ ಕಟ್ಟಿಕಾಡುತ್ತಿದ್ದು, ಶುಕ್ರವಾರ ಮತ್ತೋರ್ವ ಕಾಂಗ್ರೆಸ್ ನಾಯಕನಿಗೆ ಕೊರೋನಾ ವಕ್ಕರಿಸಿದೆ. ಈ ಹಿನ್ನೆಲೆಯಲಲ್ಇ ತಮ್ಮ ಸಂಪರ್ಕದಲ್ಲಿ ನಾಯಕರುಗಳಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಮಂಗಳೂರು, (ಜುಲೈ.17): ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

I have been tested COVID19 positive & I am under Quarantine at Bangalore. With all your love and blessings, I will recover and be back soon at your service.

My request to all those who were in close proximity with me in the last few days, kindly get yourselves checked for COVID.

— Mithun Rai (@TheMithunRai)

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದೇ ಜಿಲ್ಲೆಯ ಶಾಸಕರಾದ ಭರತ್ ಶೆಟ್ಟಿ ಹಾಗೂ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೂ ಕೋವಿಡ್ -19 ವಕ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

click me!