ಲೋಕಸಭೆಯಲ್ಲಿ ಬಣ್ಣದ ಗ್ಯಾಸ್ ಬಾಂಬ್ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆ

Published : Dec 14, 2023, 03:10 PM IST
ಲೋಕಸಭೆಯಲ್ಲಿ ಬಣ್ಣದ ಗ್ಯಾಸ್ ಬಾಂಬ್ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆ

ಸಾರಾಂಶ

ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಅಪರಿಚಿತರಿಬ್ಬರು ಸದನದೊಳಕ್ಕೆ ಹಾರಿ ಬಂದು ಬಣ್ಣಮಿಶ್ರಿತ ಗ್ಯಾಸ್‌ಬಾಂಬ್ ಹಾಕಿದ ಘಟನೆ ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಮಸಿ ಬಳಿಯುವ ಯತ್ನ ಎಂದು ಸಂಸದ ಎಸ್.ಮುನಿಸ್ವಾಮಿ ಖಂಡಿಸಿದರು. 

ಕೋಲಾರ (ಡಿ.14): ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಅಪರಿಚಿತರಿಬ್ಬರು ಸದನದೊಳಕ್ಕೆ ಹಾರಿ ಬಂದು ಬಣ್ಣಮಿಶ್ರಿತ ಗ್ಯಾಸ್‌ಬಾಂಬ್ ಹಾಕಿದ ಘಟನೆ ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಮಸಿ ಬಳಿಯುವ ಯತ್ನ ಎಂದು ಸಂಸದ ಎಸ್.ಮುನಿಸ್ವಾಮಿ ಖಂಡಿಸಿದರು. ಲೋಕಸಭೆಯಲ್ಲಿ ನಡೆದ ಘಟನೆಯ ಪ್ರತ್ಯಕ್ಷದರ್ಶಿ ಹಾಗೂ ಆರೋಪಿಗಳನ್ನು ಹಿಡಿಯುವಲ್ಲಿ ಸಹಕರಿಸಿದ ಕೋಲಾರ ಸಂಸದ ಎಸ್.ಮುನಿಸ್ವಾಮಿ ಘಟನೆ ಕುರಿತು ದೂರವಾಣಿ ಮೂಲಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. 

ಶೂನಲ್ಲಿದ್ದ ಗ್ಯಾಸ್‌ಬಾಂಬ್: ಸಂಸದರು ಹೇಳುವಂತೆ ಮಧ್ಯಾಹ್ನ 12:30 ರಿಂದ 1 ಗಂಟೆ ನಡುವಿನ ಅವಧಿಯಲ್ಲಿ ಏಕಾಏಕಿ ಇಬ್ಬರು ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ಧಾವಿಸಿ ಶೂನಲ್ಲಿಟ್ಟುಕೊಂಡಿದ್ದ ಬಣ್ಣದ ಗ್ಯಾಸ್‌ಬಾಬ್ ಸ್ಫೋಟಿಸಿದರು. ನಂತರ ಅವರನ್ನು ಹಿಡಿಯುವಲ್ಲಿ ನಾವು ಮುಂದಾದಾಗ ಸಂಸದರ ಟೇಬಲ್‌ಗಳ ಮೇಲೆಲ್ಲಾ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಂಧ್ರದ ಅನಂತಪುರಂ ಸಂಸದ ಹಾಗೂ ಮಾಜಿ ಪೊಲೀಸ್ ವೃತ್ತ ನಿರೀಕ್ಷಕರೂ ಆಗಿರುವ ಗೋರೆಂಟ್ಲ ಮಾಧವ ಅವರೊಂದಿಗೆ ತಾವು ಏಳೆಂಟು ಮಂದಿ ಆರೋಪಿಗಳನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಗಿ ವಿವರಿಸಿದರು. 

ಭದ್ರತಾ ವೈಫಲ್ಯವೆಂದು ಬಿಂಬಿಸಲು ಯತ್ನ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವಮಟ್ಟದ ನಾಯಕರಾಗಿ ಜನಪ್ರಿಯತೆ ಗಳಿಸಿದ್ದಾರೆ, ಇದನ್ನು ಸಹಿಸಲು ಆಗದ ಕೆಲವು ವಿದ್ರೋಹಿಗಳು, ದೇಶದಲ್ಲಿ ಆಂತರಿಕ ಭದ್ರತೆ ವೈಫಲ್ಯದಿಂದ ಕೂಡಿದೆ ಎಂದು ಬಿಂಬಿಸಲು ನಡೆಸಿರುವ ಷಡ್ಯಂತ್ರವಾಗಿದೆ ಎಂದು ಟೀಕಿಸಿದರು.ಇಂತಹ ಘಟನೆ ಮರುಕಳಿಸದಂತೆ ಲೋಕಸಭಾಧ್ಯಕ್ಷರು ಈಗಾಗಲೇ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ ಮತ್ತು ಸಂಸದರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ. 

ಬಿ.ಎಸ್.ಯಡಿಯೂರಪ್ಪ ಸದನಕ್ಕೆ ಬಂದು ಮಾತಾಡಲಿ: ಡಿ.ಕೆ.ಶಿವಕುಮಾರ್ ಟಾಂಗ್

ಪಾಸ್ ನೀಡುವಾಗ ಎಚ್ಚರ ಅಗತ್ಯ: ಸಂಸದರನ್ನು ನೋಡಲು ಅವರ ಕ್ಷೇತ್ರದ ಜನರು ಬಂದಾಗ ಸಂಸತ್ತಿನ ವೀಕ್ಷಣೆಗೆ ಪಾಸ್ ನೀಡುವುದು ಸಾಮಾನ್ಯ, ಮತ ನೀಡಿದವರು ಅಷ್ಟು ದೂರದಿಂದ ಬಂದಾಗ ಜನಪ್ರತಿನಿಧಿಯಾದವರು ಪಾಸ್ ನೀಡಲೇಬೇಕಾಗುತ್ತದೆ. ಆದರೆ ಇನ್ನು ಮುಂದೆ ಪಾಸ್ ನೀಡುವಾಗಲು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂಬುದನ್ನು ಈ ಘಟನೆ ತೋರಿಸಿಕೊಟ್ಟಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!