ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಂ.ಬಿ. ಪಾಟೀಲ್‌ ಹೇಳಿಕೆ ಗದ್ದಲ?

Published : May 24, 2023, 12:00 AM IST
ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಂ.ಬಿ. ಪಾಟೀಲ್‌ ಹೇಳಿಕೆ ಗದ್ದಲ?

ಸಾರಾಂಶ

ಸ್ಪೀಕರ್‌ ಚುನಾವಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರೆದಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಂ.ಬಿ.ಪಾಟೀಲ್‌ ಹೇಳಿಕೆ ಬಗ್ಗೆ ತೀವ್ರ ಪರ-ವಿರೋಧ ಚರ್ಚೆಗಳಾಗುವ ನಿರೀಕ್ಷೆಯಿದೆ. ಸರ್ಕಾರ ಸಾಂಗವಾಗಿ ನಡೆಯಬೇಕಿರುವ ಹೊತ್ತಿನಲ್ಲಿ ಎಂ.ಬಿ.ಪಾಟೀಲ್‌ ಅನಗತ್ಯವಾಗಿ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು(ಮೇ.24): ವಿಧಾನಸಭೆ ಸಭಾಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಈ ವೇಳೆ ‘ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ’ ಎಂಬ ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆ ವಿರುದ್ಧ ಅಸಮಾಧಾನ ಭುಗಿಲೇಳುವ ಸಾಧ್ಯತೆಯಿದೆ.

16ನೇ ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಯು.ಟಿ.ಖಾದರ್‌ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಕಾಂಗ್ರೆಸ್‌ ಸದಸ್ಯರೂ ಸ್ಪೀಕರ್‌ ಚುನಾವಣೆಯಲ್ಲಿ ಯು.ಟಿ.ಖಾದರ್‌ ಪರ ಮತ ಚಲಾಯಿಸುವಂತೆ ಸೂಚಿಸಲು ಹಾಗೂ ವಿಪ್‌ ಜಾರಿಗೊಳಿಸಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

ಆದರೆ, ಸ್ಪೀಕರ್‌ ಚುನಾವಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರೆದಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಂ.ಬಿ.ಪಾಟೀಲ್‌ ಹೇಳಿಕೆ ಬಗ್ಗೆ ತೀವ್ರ ಪರ-ವಿರೋಧ ಚರ್ಚೆಗಳಾಗುವ ನಿರೀಕ್ಷೆಯಿದೆ. ಸರ್ಕಾರ ಸಾಂಗವಾಗಿ ನಡೆಯಬೇಕಿರುವ ಹೊತ್ತಿನಲ್ಲಿ ಎಂ.ಬಿ.ಪಾಟೀಲ್‌ ಅನಗತ್ಯವಾಗಿ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿದ್ದಾರೆ. ಇದು ಪ್ರತಿಪಕ್ಷಗಳ ಕೈಗೆ ಅಸ್ತ್ರ ನೀಡಿದಂತಾಗಿದೆ. ಜತೆಗೆ ಪಕ್ಷದಲ್ಲೂ ಒಡಕು ಉಂಟು ಮಾಡಿದಂತಾಗಿದೆ ಎಂದು ಶಿವಕುಮಾರ್‌ ಪರ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹೀಗಾಗಿ ತೀವ್ರ ಆರೋಪ-ಪ್ರತ್ಯಾರೋಪಗಳಿಗೆ ಶಾಸಕಾಂಗ ಪಕ್ಷದ ಸಭೆ ವೇದಿಕೆಯಾಗಬಹುದು ಎಂದು ಮೂಲಗಳು ತಿಳಿಸಿವೆ.
ಇನ್ನು ಬೆಳಗ್ಗೆ 11 ಗಂಟೆಗೆ ಹಂಗಾಮಿ ಸ್ಪೀಕರ್‌ ಆರ್‌.ವಿ.ದೇಶಪಾಂಡೆ ಅವರು ಸ್ಪೀಕರ್‌ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಲಿದ್ದಾರೆ. ಇದಕ್ಕೂ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!