'ನಾನು, ಸಿದ್ದರಾಮಯ್ಯ ತಿಂಡಿ ತಿಂದೆವು, ಬೇರೇನೂ ಚರ್ಚಿಸಿಲ್ಲ'

Published : Jan 28, 2020, 08:17 AM ISTUpdated : Jan 28, 2020, 09:06 AM IST
'ನಾನು, ಸಿದ್ದರಾಮಯ್ಯ ತಿಂಡಿ ತಿಂದೆವು, ಬೇರೇನೂ ಚರ್ಚಿಸಿಲ್ಲ'

ಸಾರಾಂಶ

ಒಟ್ಟಿಗೆ ತಿಂಡಿ ಸೇವಿಸಿ ಖರ್ಗೆ-ಸಿದ್ದು ಒಗ್ಗಟ್ಟು| ಕಾಂಗ್ರೆಸ್‌ನ ಬಣ ರಾಜಕೀಯದ ಬಿಸಿ ತಣ್ಣಗಾಗಿಸಲು ಯತ್ನ

 ಬೆಂಗಳೂರು[ಜ.28]: ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ, ವಿಪಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕರ ನೇಮಕ ಕಸರತ್ತಿನ ಫಲವಾಗಿ ಮೂಲ-ವಲಸಿಗ ಕಾಂಗ್ರೆಸ್ಸಿಗರ ನಡುವೆ ಬಣ ರಾಜಕೀಯ ಬಿರುಸು ಪಡೆದಿದ್ದು, ಇದನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಉಪಾಹಾರದ ನೆಪದಲ್ಲಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದ್ದಾರೆ. ಪರಸ್ಪರ ಆತ್ಮೀಯತೆ ತೋರ್ಪಡಿಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಜನಾರ್ದನ ಹೋಟೆಲ್‌ಗೆ ತೆರಳಿದ ನಾಯಕರು, ಉಪಾಹಾರ ಸೇವಿಸುವ ನೆಪದಲ್ಲಿ ಕಾಂಗ್ರೆಸ್‌ನ ಪ್ರಸಕ್ತ ಬೆಳವಣಿಗೆಗಳ ಬಗ್ಗೆಯೂ ಅನೌಪಚಾರಿಕವಾಗಿ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಹೋಟೆಲ್‌ನಲ್ಲಿ ಒಟ್ಟಿಗೆ ತಿಂಡಿ ಸೇವಿಸಿ ಖರ್ಗೆ, ಸಿದ್ದು ಒಗ್ಗಟ್ಟು!

ಹಲವು ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ, ಕಾರ್ಯಾಧ್ಯಕ್ಷ ಸ್ಥಾನ, ವಿಪಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ಸ್ಥಾನ ಬೇರ್ಪಡಿಸುವ ಕುರಿತು ಮೂಲ ಹಾಗೂ ವಲಸಿಗ ಕಾಂಗ್ರೆಸ್ಸಿಗರ ನಡುವೆ ಗೊಂದಲಗಳು ಮುಂದುವರೆದಿವೆ. ಇತ್ತೀಚೆಗೆ ಎರಡೂ ಬಣದ ನಾಯಕರೂ ಬಹಿರಂಗವಾಗಿಯೇ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಬಣ ರಾಜಕೀಯದ ಬಿಸಿ ತಾರಕಕ್ಕೇರಿತ್ತು.

ಈ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡಿದ್ದ ಹೈಕಮಾಂಡ್‌ ನಾಯಕರು ಒಗ್ಗಟ್ಟು ಪ್ರದರ್ಶಿಸುವಂತೆ ರಾಜ್ಯ ನಾಯಕರಿಗೆ ತಾಕೀತು ಮಾಡಿದ್ದರು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಜತೆ ಮಾತನಾಡಿದ್ದ ನಾಯಕರು, ಬಣ ರಾಜಕೀಯದಿಂದ ಪಕ್ಷದ ಬಗ್ಗೆ ಜನರಲ್ಲಿ ಕೆಟ್ಟಅಭಿಪ್ರಾಯ ಮೂಡುತ್ತದೆ. ಹೀಗಾಗಿ ಕೂಡಲೇ ಗೊಂದಲಗಳನ್ನು ಬಗೆಹರಿಸಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಸೂಚನೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷನಾಗಲು ನನಗೆ ಆಸಕ್ತಿ ಇಲ್ಲ: ಖರ್ಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ