
ಬೆಂಗಳೂರು(ಜ.15): ‘ಬೆಂಗಳೂರು ಅರಮನೆ ಮೈದಾನದಲ್ಲಿ ಜ.16ರಂದು ನಡೆಯಲಿರುವ ‘ನಾ ನಾಯಕಿ’ ಸಮಾವೇಶ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಸೂಚನೆ ನೀಡಿದ್ದಾರೆ.
ಅಲ್ಲದೆ, ನಾ ನಾಯಕಿ ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದೂ ಹೇಳಿದರು.
ಈ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಲು ಮನವಿ ಇಡ್ತೇವೆ: ಉಮಾಶ್ರೀ
ನಾ ನಾಯಕಿ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸಲಿದ್ದಾರೆ. ಮಹಿಳಾ ನಾಯಕಿಯರು, ಕಾರ್ಯಕರ್ತರು ಅವರ ಬೇಡಿಕೆಗಳನ್ನು ಮಂಡಿಸಲಿದ್ದಾರೆ. ಹೀಗಾಗಿ ಇದು ಮಹಿಳೆಯರಿಗೆ ಮೀಸಲಾದ ಕಾರ್ಯಕ್ರಮ. ಪುರುಷರು ಬಂದರೆ ಅವಕಾಶ ಸಿಗದೆ ಸಮಯ ವ್ಯರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.