ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಬಿ. ಸಿ. ನಾಗೇಶ್

Published : Oct 08, 2021, 04:45 PM ISTUpdated : Oct 08, 2021, 08:27 PM IST
ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಬಿ. ಸಿ. ನಾಗೇಶ್

ಸಾರಾಂಶ

* ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಬಿ. ಸಿ. ನಾಗೇಶ್  * ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭ * ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಘೋಷಣೆ

ಉಡುಪಿ, (ಅ.08): ದಸರಾ (Dasara) ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟಪಡಿಸಿದರು.

"

ಇಂದು (ಅ.08) ಉಡುಪಿಯಲ್ಲಿ (Udupi) ಮಾತನಾಡಿದ ನಾಗೇಶ್ (BC Nagesh), ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು (Schools) ಆರಂಭಿಸುತ್ತೇವೆ. ಜತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ (Midday Meal) ಆರಂಭವಾಗಲಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.

6ರಿಂದ 12ನೇ ಕ್ಲಾಸ್‌ ಪೂರ್ಣ ಪ್ರಮಾಣದಲ್ಲಿ ಆರಂಭ

ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಕೊರೋನಾ (Coronavirus) ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ (positivity) ಶೂನ್ಯ ಪ್ರಮಾಣದಲ್ಲಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸುತ್ತೇವೆ. ಜತೆಗೆ ಬಿಸಿಯೂಟ ಆರಂಭವಾಗಲಿದೆ ಎಂದರು.

ಎಲ್ಲರಿಗೂ ಶಾಲೆ(School) ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್ (Online) ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು (Class) ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ ಎಂದು ತಿಳಿಸಿದರು.

 ಆನ್ಲೈನ್ ತರಗತಿಯಿಂದ (Online Class) ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ (Students) ಹಾಜರಾತಿ ಶೇ. 90ರಷ್ಟಿದೆ ಎಂದು ನಾಗೇಶ್ ಮಾಹಿತಿ ನೀಡಿದರು.

ಕೊರೋನಾ ಕಾರಣದಿಂದ ಕಳೆದೊಂದು ವರ್ಷದಿಂದ ವಿದ್ಯಾರ್ಥಿಗಳು ಶಿಕ್ಷಣ (Education) ಜೊತೆಗೆ ಬಿಸಿಯೂಟದಿಂದಲೂ ವಂಚಿರಾಗಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದು ಎಂದು ಬಿಸಿಯೂಟದ ಅಕ್ಕಿ, ಬೇಳೆ ಸೇರಿದಂತೆ ಆಹಾರ  ಪದಾರ್ಥಗಳನ್ನ ಮನೆಗೆ ನೀಡಲಾಯ್ತು. ಇದೀಗ ಕೋವಿಡ್ ಕಡಿಮೆಯಾಗಿದ್ದರಿಂದ ಶಿಕ್ಷಣ ಕ್ಷೇತ್ರ ಹಂತ-ಹಂತವಾಗಿ ಚೇತರಿಸಿಕೊಳ್ಳುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ