ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ: ಸಂಭ್ರಮಾಚರಣೆಗಾಗಿ ಬೆಂಗ್ಳೂರಿನಿಂದ ಹೊರಟ ಸಚಿವ

Published : Feb 08, 2021, 04:22 PM ISTUpdated : Feb 08, 2021, 05:49 PM IST
ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ: ಸಂಭ್ರಮಾಚರಣೆಗಾಗಿ ಬೆಂಗ್ಳೂರಿನಿಂದ ಹೊರಟ ಸಚಿವ

ಸಾರಾಂಶ

ವಿವಾದದ ನಡುವೆಯೂ ಕೊಟ್ಟ ಭರವಸೆಯಂತೆ ಸಚಿವ ಆನಂದ್ ಸಿಂಗ್ ಬೇಡಿಕೆ ಈಡೇರಿಸುವಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಫೆ.08): ಮೂಲಸೌಲಭ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಬೇಡಿಕೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊನೆಗೂ ಈಡೇರಿಸಿದ್ದಾರೆ.

"

ಹೌದು...ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವಾದದ ನಡುವೆಯೂ ವಿಜಯನಗರವನ್ನು ಇಂದು (ಸೋಮವಾರ) ಅಧಿಕೃತವಾಗಿ ಜಿಲ್ಲೆಯಾಗಿ ಘೋಷಣೆ ಮಾಡಿದರು.  ಇದರೊಂದಿಗೆ ಅಧಿಕೃತವಾಗಿ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಉದಯವಾಯ್ತು.

"

ಬಳ್ಳಾರಿ ರೆಡ್ಡಿ ಬ್ರದರ್ಸ್ ವಿರೋಧದ ನಡುವೆಯೂ ಸಿಎಂ ಬಿಎಸ್‌ವೈ, ಆನಂದ್ ಸಿಂಗ್ ಅವರ ವಿಜಯನಗರ ಜಿಲ್ಲೆ ಕನಸನ್ನು ನನಸು ಮಾಡಿದ್ದಾರೆ. 

ವಿಜಯನಗರ ಸಾಮ್ರಾಜ್ಯ ಸ್ಥಾಪಕರು ಯಾರು? ವಿದ್ಯಾರ್ಥಿಯ ಫನ್ನಿ ಉತ್ತರ ವೈರಲ್

ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬಳಿಕ ಆನಂದ್ ಸಿಂಗ್ ಅವರು ವಿಜಯನಗರ ಜಿಲ್ಲೆಯನ್ನಾಗಿ ಮಾಡಬೇಕೆಂದು ಯಡಿಯೂರಪ್ಪ ಬಳಿ ಬೇಡಿಕೆ ಇಟ್ಟಿದ್ದರು. ಅಂದು ಬಿಎಸ್‌ವೈ ಕೊಟ್ಟ ಭರವಸೆಯನ್ನುಈಗ ಈಡೇರಿಸಿದ್ದಾರೆ. 

ಆದೇಶ ಪಡೆದು ವಿಜಯನಗರದತ್ತ ಮುಖ

ಇನ್ನು ಅರಣ್ಯ ಖಾತೆ ಹಿಂಪಡೆದು ಹಜ್ ಮತ್ತು ವಕ್ಫ್ ಕೊಟ್ಟಿರುವುದಕ್ಕೆ ಬೇಸರಲ್ಲಿದ್ದ ಆನಂದ್ ಸಿಂಗ್ ಅವರಿಗೆ ಇದೀಗ ವಿಜಯನಗರ ಜಿಲ್ಲೆಯ ಅಧಿಕೃತ ಆದೇಶ ಕೊಡುವ ಮೂಲಕ ಸಮಾಧಾನಪಡಿಸಲಾಗಿದೆ. 

ಅಧಿಕೃತ ಆದೇಶ ಸ್ವೀಕರಿಸಿ ಫುಲ್ ಖುಷಿಯಲ್ಲಿರುವ ಆನಂದ್ ಸಿಂಗ್, ಸೋಮವಾರ ಸಂಜೆ ಸಂಭ್ರಮಾಚರಣೆಯಲ್ಲಿ‌ ಭಾಗಿಯಾಗಲೆಂದು ಬೆಂಗಳೂರಿನಿಂದ ಹೊಸಪೇಟೆಯತ್ತ ಹೊರಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್