
ಬೆಂಗಳೂರು, (ಆ.27): ಸಚಿವ ಆನಂದ್ ಸಿಂಗ್ ಕೊನೆಗೂ ಕೊಟ್ಟ ಖಾತೆಯಲ್ಲೇ ಮುಂದುವರಿದಿದ್ದು, ಖಾತೆ-ಕ್ಯಾತೆ ಹಾಗೂ ರಾಜೀನಾಮೆ ಪ್ರಹಸನ ಕೊನೆಗೂ ಸುಖಾಂತ್ಯ ಕಂಡಿದೆ. ಕೊಟ್ಟ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇನ್ನು ಈ ಬಗ್ಗೆ ಇಂದು (ಆ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಮುಗಿದ ಮೇಲೆ ಖಾತೆಯ ಬಗ್ಗೆ ಪೋಸ್ಟ್ ಮಾರ್ಟಮ್ ಮಾಡಬೇಡಿ. ಇದು ಬೆಸ್ಟ್ ಖಾತೆ ಬಿಡ್ರಿ. ಕೆಲವೊಂದು ಬಹಿರಂಗ ಮಾತಾನಾಡಲ್ಲ ಎಂದರು.
ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್ ಸಿಂಗ್
ಸಿಎಂ ದೆಹಲಿಯಿಂದ ವಾಪಾಸ್ಸಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಆನಂದ್ ಸಿಂಗ್, ನಾನು ಸಿಎಂ ಅವನ್ನು ಭೇಟಿ ಆಗಿಲ್ಲ. ನಾನು ಸಂದೇಶ ಕೊಡೋಕೆ ಹೋಗ್ತೀನಿ ತಗೋಳೋಕ್ಕೆ ಹೋಗೋದಿಲ್ಲ ಎಂದು ಹೇಳಿದರು.
ನನಗೆ ಕೊಟ್ಡಿರುವ ಖಾತೆಗಳು ಅತ್ಯುತ್ತಮ ಖಾತೆ. ಕೆಲವು ವಿಚಾರಗಳನ್ನ ಬಹಿರಂಗವಾಗಿ ಹೇಳೊಕೆ ಆಗಲ್ಲ. ನನಗೆ ಅಸಮಾಧಾನ ಅನ್ನೋದನ್ನ ಎಲ್ಲಿಯಾದರೂ ಹೇಳಿದಿನಾ..? ಕೆಲವೊಂದಿಷ್ಟು ಮನವಿ ಮಾಡಿದ್ದೀನಿ. ಅದನ್ನ ಬಹಿರಂಗವಾಗಿ ಹೇಳೋಕೆ ಆಗಲ್ಲ. ಮನವಿಯನ್ನ ಬಗೆಹರಿಸೋದು ಅವರಿಗೆ ಬಿಟ್ಟಿದ್ದು. ಖಾತೆ ಗುಡ್ ಎಂದರು, ಆದರೆ ತೃಪ್ತಿ ಬಗ್ಗೆ ಮಾತನಾಡಲಿಲ್ಲ.
ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಇತ್ತೀಚೆಗೆ ದೆಹಲಿಗೆ ತೆರಳಿ ಪ್ರಬಲ ಖಾತೆಯನ್ನು ಪಡೆಯಲು ಲಾಭಿ ನಡೆಸಿದ್ದರು. ಆದರೆ, ಇದು ಸಾಧ್ಯವಾಗದಿದ್ದಾಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದವು. ಆದರೆ ಈ ಮುನಿಸು ಸದ್ಯಕ್ಕೆ ಶಮನವಾಗಿದೆ ಎನ್ನಲಾಗಿದ್ದು, ಆನಂದ್ ಸಿಂಗ್ ಕೊನೆಗೂ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.