
ಬೆಳಗಾವಿ(ಏ.14): ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ಮಂಗಲ ಸುರೇಶ್ ಅಂಗಡಿ ಪರ ಸಿಎಂ ಯಡಿಯೂರಪ್ಪ ಸೇರಿ ಅನೇಕ ನಾಯಕರು ಪ್ರಚಾರವನ್ನ ಮಾಡುತ್ತಿದ್ದಾರೆ. ನಾಳೆ, ನಾಡಿದ್ದು ನಾನೂ ಸಹ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಉಪಚುನಾವಣೆ ಫಲಿತಾಂಶದ ಬಳಿಕಲ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ರಣದೀಪ್ಸಿಂಗ್ ಸುರ್ಜೇವಾಲ ಹೇಳಿಕೆಗೆ ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಚುನಾವಣಾ ವಿಷಯ ಬೇರೆ ಇಲ್ಲವೇ ಇಲ್ಲ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಸರ್ಕಾರ ಏಕೆ ಪತನ ಆಗುತ್ತೆ ಕಾರಣ ಏನು? ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್
ರಣದೀಪ್ಸಿಂಗ್ ಸುರ್ಜೇವಾಲ ಉಪಚುನಾವಣೆ ಬಳಿಕ ಸರ್ಕಾರ ಪತನ ಮಾಡಲು ವ್ಯೂಹ ಏನಾದರೂ ರಚಿಸಿದ್ದಾರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಯಾವುದೇ ವ್ಯೂಹ ರಚಿಸಿದರೂ ನಮ್ಕ ಸರ್ಕಾರ ಸುರಕ್ಷಿತವಾಗಿರುತ್ತದೆ. ಸುರ್ಜೇವಾಲ ಅವರಿಗೆ ನಿಶ್ಚಿತವಾಗಿ ನಿರಾಸೆಯಂತೂ ಆಗುತ್ತದೆ ಎಂದು ತಿಳಿಸಿದ್ದಾರೆ.
'ವಿಜಯೇಂದ್ರ ಟ್ಯಾಕ್ಸ್' ಆರೋಪ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಆರೋಪಗಳು ಇದ್ದೆ ಇರುತ್ತವೆ, ಕಾಂಗ್ರೆಸ್ ನವರು ಆರೋಪಗಳನ್ನ ಮಾಡಲೇಬೇಕಲ್ಲ. ಈ ರೀತಿ ಆರೋಪಗಳನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.