BSY ಸಂಪುಟದ ಮತ್ತೋರ್ವ ಸಚಿವರಿಂದ ಖಾತೆ ಬಗ್ಗೆ ಅಸಮಾಧಾನ

Suvarna News   | Asianet News
Published : Feb 07, 2021, 03:18 PM ISTUpdated : Feb 07, 2021, 03:20 PM IST
BSY ಸಂಪುಟದ ಮತ್ತೋರ್ವ ಸಚಿವರಿಂದ ಖಾತೆ ಬಗ್ಗೆ ಅಸಮಾಧಾನ

ಸಾರಾಂಶ

ಈಗಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟದ ಅನೇಕರು ಖಾತೆ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದು ಇದೀಗ ಮತ್ತೋರ್ವ ಸಚಿವರು ಅಸಮಾಧಾನಿತರ ಸಾಲಿಗೆ ಸೇರಿದ್ದಾರೆ. 

ಚಾಮರಾಜನಗರ (ಫೆ.07):  ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷ ಅಸಮಧಾನ ಹೊರಹಾಕಿದ್ದಾರೆ.

ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭದಲ್ಲಿ  ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ ನನಗೆ ಎರಡು ಖಾತೆ ಕೊಟ್ಟಿದ್ದಾರೆ.  ರಾತ್ರಿ ವೇಳೆ ಕಾಡಿಗೆ ಹೋಗಬೇಕು, ಹಗಲು ವೇಳೆ ನಾಡಿಗೆ ಬರಬೇಕು ಎಂದಿದ್ದಾರೆ. 

ಬಿ​ಎ​ಸ್‌ವೈ ಸಿಎಂ ಅವಧಿ : ಡಿಸಿಎಂ ಅಶ್ವತ್ಥ್ ನಾರಾಯಣ್ ಹೀಗೆಂದರು

ಕಾಡು ಮತ್ತು ನಾಡು ಎರಡನ್ನು ನೋಡಿಕೊಳ್ಳುವ ಜವಬ್ದಾರಿ ಕೊಟ್ಟಿದ್ದಾರೆ. ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಕೊಟ್ಟಿರುವ ಬಗ್ಗೆ ಈ ವೇಳೆ ಪ್ರಸ್ತಾಪಿಸಿ ತಮ್ಮ ಅಸಮಾಧಾನ ಹೊರಹಾಕಿದರು. 

ಮೂಲತಃ ನಾನು ಸಿವಿಲ್ ಇಂಜಿನಿಯರ್.  ಕಾಡಿನ ಬಗ್ಗೆ ಗ್ರಾಮೀಣ ಭಾಗದ ಸಾಮಾನ್ಯ ಯುವಕನಿಗೆ ಇರುವ ಮಾಹಿತಿಯು ನನಗಿಲ್ಲ. ಇದೆಲ್ಲವನ್ನು ತಿಳಿದುಕೊಳ್ಳಲು ಕೆಲವು ಸಮಯ ಬೇಕಾಗುತ್ತದೆ ಎಂದು ಖಾತೆ ಬಗ್ಗೆ ಇರುವ ತಮ್ಮ ಅಸಮಾಧಾನ ಹೊರಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್