70 ಸ್ಥಾನ ಪಡೆದಿದ್ದ ಕಾಂಗ್ರೆಸ್‌ಗೆ ಸಿಗೋದು 20 ಸ್ಥಾನ ಎಂದ ನಾಯಕ

Kannadaprabha News   | Asianet News
Published : Sep 04, 2021, 07:33 AM IST
70 ಸ್ಥಾನ ಪಡೆದಿದ್ದ ಕಾಂಗ್ರೆಸ್‌ಗೆ ಸಿಗೋದು 20 ಸ್ಥಾನ ಎಂದ ನಾಯಕ

ಸಾರಾಂಶ

ಬಿಜೆಪಿಯಲ್ಲಿ ಹಣ ನೀಡುವ, ಪಡೆದುಕೊಳ್ಳುವ ಸಂಸ್ಕೃತಿ ಇಲ್ಲ. ಅದೇನಿದ್ದರೂ ಜೆಡಿಎಸ್‌ನಲ್ಲಿ  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಕಂದಾಯ ಸಚಿವ ಆರ್‌.ಅಶೋಕ್‌ ತಿರುಗೇಟು

 ಬೆಂಗಳೂರು (ಸೆ.04):  ಬಿಜೆಪಿಯಲ್ಲಿ ಹಣ ನೀಡುವ, ಪಡೆದುಕೊಳ್ಳುವ ಸಂಸ್ಕೃತಿ ಇಲ್ಲ. ಅದೇನಿದ್ದರೂ ಜೆಡಿಎಸ್‌ನಲ್ಲಿ ಸೂಟ್‌ಕೇಸ್‌ ಸಂಸ್ಕೃತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಕಂದಾಯ ಸಚಿವ ಆರ್‌.ಅಶೋಕ್‌ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸೂಟ್‌ಕೇಸ್‌ ಸಂಸ್ಕೃತಿ ಇಲ್ಲ. ಜೆಡಿಎಸ್‌ನಲ್ಲಿ ಆ ಸಂಸ್ಕೃತಿ ಇದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅತ್ಯಂತ ಶಿಸ್ತಿನ, ಪ್ರಾಮಾಣಿಕ ರಾಜಕಾರಣಿ. ಅಂತಹವರ ಬಗ್ಗೆ ಕೀಳುಮಟ್ಟದ ಆಪಾದನೆ ಮಾಡುವುದು ಮಾಜಿ ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ. ಕಳೆದ 3-4 ದಶಕಗಳಿಂದ ಅರುಣ್‌ ಸಿಂಗ್‌ ರಾಜಕಾರಣ ಮಾಡುತ್ತಿದ್ದಾರೆ. ಅವರು ಪಕ್ಷಕ್ಕಾಗಿ ದುಡಿಯುತ್ತಾ ಬಂದಿದ್ದಾರೆ. ಅವರು ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾಡಿದರು.

ಅರುಣ್‌ ಸಿಂಗ್‌ ವಿರುದ್ಧ ಎಚ್‌ಡಿಕೆ, ರೇವಣ್ಣ ಕಿಡಿ

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಬಗ್ಗೆ ನಮಗೆಲ್ಲ ಅಪಾರ ಗೌರವ ಇದೆ. ಅವರ ಮಗನಾಗಿ ಬೇರೆಯವರಿಗೆ ಗೌರವ ನೀಡುವುದನ್ನು ಕಲಿತುಕೊಳ್ಳಬೇಕು. ಆಧಾರ ಇಲ್ಲದೆ ಸುಮ್ಮನೇ ಮಾತನಾಡುವುದು ಕುಮಾರಸ್ವಾಮಿಗೆ ಅಭ್ಯಾಸವಾಗಿದ್ದು, ಅದಕ್ಕೆ ವಾಚಾಳಿತನ ಎನ್ನುತ್ತಾರೆ. ಇದನ್ನಾದರೂ ಇಂತಹ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಡಬೇಕು. ಅವರ ಘನತೆಗೆ ತಕ್ಕಂತೆ ಮಾತನಾಡುವುದನ್ನು ಕಲಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮಾಡಿ 70 ಸ್ಥಾನಗಳನ್ನು ಕಾಂಗ್ರೆಸ್‌ ಪಡೆದಿದೆ. ಮತ್ತೊಮ್ಮೆ ಲಿಂಗಾಯತ ಧರ್ಮ ಹೋರಾಟಕ್ಕೆ ಮುಂದಾದರೆ ಮುಂದಿನ ಚುನಾವಣೆಯಲ್ಲಿ ಮೂಲೆಗುಂಪಾಗಿ 20 ಸ್ಥಾನ ಪಡೆದುಕೊಳ್ಳಲಿದೆ ಎಂದು ಲೇವಡಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?