ಕಾಂಗ್ರೆಸ್‌ ದಮ್ಮಿದ್ರೆ ಸಿಎಂ ಅಭ್ಯರ್ಥಿ ಘೋಸಿಸಲಿ: ಶ್ರೀರಾಮುಲು ಸವಾಲ್‌

Published : Mar 12, 2023, 11:30 PM IST
ಕಾಂಗ್ರೆಸ್‌ ದಮ್ಮಿದ್ರೆ ಸಿಎಂ ಅಭ್ಯರ್ಥಿ ಘೋಸಿಸಲಿ: ಶ್ರೀರಾಮುಲು ಸವಾಲ್‌

ಸಾರಾಂಶ

ಕಾಂಗ್ರೆಸ್‌ನಲ್ಲಿ ಕೆಲವು ನಾಯಕರ ನಡುವೆ ಅಧಿಕಾರಕ್ಕಾಗಿ ಕಿತ್ತಾಟವಿದೆ. ಮುಖ್ಯಮಂತ್ರಿಯಾಗಲು ಹಲವರು ಹವಣಿಸುತ್ತಿದ್ದಾರೆ. ಸಿಎಂ ಅಭ್ಯರ್ಥಿ ಘೋಷಣೆ ಮಾಡಿದರೆ ಪಕ್ಷದಲ್ಲಿನ ನಾಯಕರ ವೈಮನಸ್ಸು ಹೊರಗೆ ಬರಲಿದೆ ಎಂದು ತಿಳಿಸಿದ ರಾಮುಲು. 

ಲಿಂಗಸುಗೂರು(ಮಾ.12): ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಅನೇಕರು ಟವೆಲ್‌ ಹಾಕಿದ್ದಾರೆ. ಕಾಂಗ್ರೆಸ್‌ಗೆ ತಾಕತ್ತು, ದಮ್ಮು ಇದ್ದರೆ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಲಿ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದ್ದಾರೆ. 

ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಕೆಲವು ನಾಯಕರ ನಡುವೆ ಅಧಿಕಾರಕ್ಕಾಗಿ ಕಿತ್ತಾಟವಿದೆ. ಮುಖ್ಯಮಂತ್ರಿಯಾಗಲು ಹಲವರು ಹವಣಿಸುತ್ತಿದ್ದಾರೆ. ಸಿಎಂ ಅಭ್ಯರ್ಥಿ ಘೋಷಣೆ ಮಾಡಿದರೆ ಪಕ್ಷದಲ್ಲಿನ ನಾಯಕರ ವೈಮನಸ್ಸು ಹೊರಗೆ ಬರಲಿದೆ ಎಂದು ತಿಳಿಸಿದರು.

ರಾಯಚೂರು ನಗರದ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ, ಹೈಕಮಾಂಡ್ ಭೇಟಿ ಮಾಡಿದ ಮೂಲ ಬಿಜೆಪಿಗರು!

ಭಾರತ್‌ ಜೋಡೊ ಯಾತ್ರೆ ನಡೆಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೋದಲ್ಲಿ ಬಂದಲ್ಲಿ ಕಾಂಗ್ರೆಸ್‌ ಮಟಾಶ್‌ ಆಗಿದೆ. ಅವರ ಗ್ಯಾರಂಟಿ, ವಾರಂಟಿಗಳನ್ನು ನಂಬಬೇಡಿ ಎಂದ ಅವರು, ಕಾಶ್ಮೀರದಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುವಾಗ ಉಗ್ರಗಾಮಿಗಳು ಭೇಟಿಯಾದರಂತೆ, ಅವರಿಗೆ ಏನು ಮಾಡಲಿಲ್ಲ ಎಂದು ದೇಶದ ಆಚೆ ಹೇಳುತ್ತಾರೆ. ಭಯೋತ್ಪಾದಕರು ಭೇಟಿ ಆದಾಗ ಏಕೆ ದೂರು ನೀಡಲಿಲ್ಲ. ಕಾಂಗ್ರೆಸ್‌ ಪ್ರಜಾಪ್ರಭುತ್ವದ ವ್ಯವಸ್ಥೆ ಮಾರಕ ಎಂಬುದು 1975-79, 1984ರಲ್ಲಿ ಸಿಖ್‌ ಸಮುದಾಯದ ನರಮೇಧ ನಡೆಸಿ ಸಾಬೀತು ಮಾಡಿದೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ। ಯತೀಂದ್ರ ವಿರುದ್ಧ ಡಿಕೆಶಿ ಬಣ ಮತ್ತೆ ಬಾಣ
ಮತ್ತೆ ಟಿಪ್ಪು ಜಯಂತಿ ವಿವಾದ ಭುಗಿಲು