
ಬಳ್ಳಾರಿ(ನ.19): ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿ ಅಲೆಮಾರಿಯಾಗಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದರು.
ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯ ನಾಯಕರು ಅಂತಾರೆ. ಆದರೆ, ಪಾಪ ರಾಜ್ಯ ನಾಯಕರಿಗೆ ಸ್ಪರ್ಧೆ ಮಾಡಲು ಸೂಕ್ತ ಕ್ಷೇತ್ರವೇ ಸಿಗುತ್ತಿಲ್ಲ. ಹೀಗಾಗಿ ಅಲ್ಲಲ್ಲಿ ಹುಡುಕಾಟ ನಡೆಸಿದ್ದಾರೆ. ಚಾಮುಂಡಿ ಕ್ಷೇತ್ರದಲ್ಲಿ ಸೋಲುತ್ತೇನೆ ಎಂಬ ಭಯದಿಂದ ಬಾದಾಮಿಗೆ ಬಂದು ಅಲ್ಪ ಮತಗಳಿಂದ ಗೆದ್ದರು. ಈ ಬಾರಿ ಬಾದಾಮಿಯಲ್ಲಿ ಸೋಲುವ ಭಯ ಕಾಡಲಾರಂಭಿಸಿದ್ದು, ಮತ್ತೊಂದು ಕ್ಷೇತ್ರದ ಕಡೆ ಹುಡುಕಾಟ ನಡೆಸುತ್ತಿದ್ದಾರೆ. ಒಮ್ಮೆ ಕೋಲಾರ ಅಂತಾರೆ ಮತ್ತೊಮ್ಮೆ ಇನ್ಯಾವುದೋ ಕ್ಷೇತ್ರ ಎನ್ನುತ್ತಾರೆæ ಎಂದು ಕುಟುಕಿದರು. ಈ ಬಾರಿಯೂ ಮತ್ತೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಶ್ರೀರಾಮುಲು, ಮೊದಲು ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ, ಎಲ್ಲಿಂದ ಅರ್ಜಿ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಲಿ. ಬಳಿಕ ನಾನು ಎಲ್ಲಿ ಸ್ಪರ್ಧಿಸಬೇಕು ಎಂದು ಪಕ್ಷ ನಿರ್ಧರಿಸುತ್ತದೆ ಎಂದರು.
Ballari Politics: ರೆಡ್ಡಿ ಕುಟುಂಬದ ವಿರುದ್ಧ ಸಿಡಿದೆದ್ದ ಬಿಜೆಪಿ ಮುಖಂಡ!
ಎಂದರಲ್ಲದೆ, ಸಿದ್ದರಾಮಯ್ಯ ರಾಜ್ಯ ನಾಯಕರು ಅವರು ಎಲ್ಲಿ ನಿಂತರೂ ಗೆಲ್ಲಬೇಕು ಅಲ್ಲವೇ? ಅದ್ಹೇಕೆ ಕ್ಷೇತ್ರಕ್ಕಾಗಿ ಅಲೆದಾಟ ನಡೆಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.