
ರಾಯಚೂರು(ಮಾ.11): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಹರಿಕೆಯ ಕುರಿಯಾಗಿದ್ದಾರೆ ಎಂದು ಸಾರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಟೀಕಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಹಿಂದೆ ಡಿ. ದೇವರಾಜ ಅರಸು, ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಬಂಗಾರಪ್ಪ ಅವರೊಂದಿಗೆ ಯಾವ ರೀತಿಯಾಗಿ ನಡೆದುಕೊಂಡಿತ್ತೋ ಅದೇ ರೀತಿಯಾಗಿ ಸಿದ್ದರಾಮಯ್ಯ ಅವರನ್ನು ಸಹ ಪಕ್ಷವು ಬಳಸಿಕೊಳ್ಳುತ್ತಿದ್ದು, ಈ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದು. ಕಾಂಗ್ರೆಸ್ ಪಕ್ಷದ ಧೈರ್ಯ ತಾಕತ್ತು ಇದ್ದರೆ, ಸಿದ್ದರಾಮಯ್ಯನ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುವಂತೆ ಸವಾಲು ಎಸೆದರು.
ರಾಯಚೂರು ವಿಧಾನಸಭಾ ಚುನಾವಣೆ : ಎಸ್ ಎಸ್ ರಾಜಮೌಳಿ ಚುನಾವಣಾ ಐಕಾನ್!
ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸೃಷ್ಟಿಯಾಗಿದೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಅವರ ಗುಂಪುಗಾರಿಕೆಯಿಂದಾಗಿ ಕಾಂಗ್ರೆಸ್ ಮನೆಯು ಮುರಿದು ಹೋಗಿ ಮನೆಯೊಂದು ಮೂರು ಬಾಗಿಲಾಗಿದೆ ಎಂದರು.
ತಾವು ಸಿಎಂ ಆಕಾಂಕ್ಷಿಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಅವರು ಇಷ್ಟುದಿನ ನಮಗೆ ಉಪಮುಖ್ಯಮಂತ್ರಿ ಸಿಕ್ಕಿಲ್ಲ ಏಕೆ ಎನ್ನುತ್ತಿದ್ದರು, ಇದೀಗ ಪ್ರಮೋಷ್ ಸಿಕ್ಕಿದೆ ಅದಕ್ಕಾಗಿ ಸಿಎಂ ಸರದಿಯನ್ನು ಆರಂಭಿಸಲಾಗಿದೆ. ನಿಭಾಯಿಸುವ ಶಕ್ತಿ ಇದೆ, ಸಿಎಂ ಆಗಲು ಪಕ್ಷ ಅವಕಾಶ ಮಾಡಿಕೊಟ್ಟರೆ ಆಗೋಣ ಎಂದರು.
ಪದೇ ಪದೇ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, ದೇಶ ಮತ್ತು ರಾಜ್ಯದಲ್ಲಿ ಪಕ್ಷವನ್ನು ಉಳಿಸಿಕೊಳ್ಳುವುದಕ್ಕಾಗಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ, ಅದು ಅವರ ಕರ್ತವ್ಯವೂ ಆಗಿದೆ. ಮುತಾಲಿಕ್ ಅವರ ಬಗ್ಗೆ ನಮಗೆ ಗೌರವಿದೆ. ಅವರು ಹಿಂದೂತ್ವದ ಬಗ್ಗೆ ಬಹಳಷ್ಟುಶ್ರಮಿಸಿದ್ದಾರೆ. ಆದರೆ, ಅವರು ಮೋದಿ ಹೆಸರಲ್ಲಿ ಮತ ಕೇಳಬಾರದು ಅಂತ ಹೇಳುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ನಿನಗೆ ಗಂಡಸ್ತನ ಇದ್ರೆ ನಿನ್ನ ಶಕ್ತಿ ಪ್ರೊವ್ ಮಾಡು: ಎಚ್ಡಿಕೆಗೆ ನೇರ ಸವಾಲು ಹಾಕಿದ ಶಿವನಗೌಡ ನಾಯಕ
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ನಮ್ಮ ಪಕ್ಷವು ಎಲ್ಲ ಸ್ಥಾನಮಾನ ನೀಡಿದೆ. ನಮ್ಮ ಪಕ್ಷದವರನ್ನು ನಂಬಿವರ ಕೈ ಬಿಟ್ಟಿಲ್ಲ. ಜನಾರ್ದನರೆಡ್ಡಿ ಅವರಿಗೆ ಸಿಬಿಐನಿಂದ ನೋಟಿಸ್ ನೀಡಿರುವುದು ಕಾರ್ಯವನ್ನು ಆ ಸಂಸ್ಥೆ ಮಾಡಿದೆ. ಬಿಜೆಪಿ ಪಕ್ಷವರಿಗೂ ಅನೇಕ ದಾಳಿ, ನೋಟೀಸ್ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸಾರಿಗೆ ಬಸ್ ಬೆಂಕಿ ಅವಘಡದಲ್ಲಿ ಮೃತಪಟ್ಟಚಾಲಕ ಹಾಗೂ ನಿರ್ವಾಹಕರಿಗೆ 5 ಲಕ್ಷ ರು. ಪರಿಹಾರ, ಕುಟುಂಬಸ್ಥರಿಗೆ ನೌಕರಿ ಹಾಗೂ ವಿಮೆ ಹಣ ಮಂಜೂರಿಗೆ ಸೂಚನೆ ನೀಡಲಾಗಿದೆ. ಸಾರಿಗೆ ನೌಕರರ ವೇತನ ಹೆಚ್ಚಳ ಕುರಿತು ಶೇ. 10ರಷ್ಟು ವೇತನ ಹೆಚ್ಚಳಕ್ಕೆ ಭರವಸೆ ನೀಡಿದ್ದು, ಸರ್ಕಾರಿ ನೌಕರರ ಮಾದರಿಯಲ್ಲಿ ಶೇ. 17ರಷ್ಟು ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಆದಷ್ಟು ಶೀಘ್ರದಲ್ಲಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.