
ಬೆಂಗಳೂರು, (ನ.16): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಜೊತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಇಂದು (ಸೋಮವಾರ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಬಿ.ಸಿ.ಪಾಟೀಲ್, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ ಬೇಡಿಕೆ
ಬಳಿಕ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನಗೆ ಸರ್ಕಾರ ಆದೇಶ ಮಾಡಿದೆ. ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಬಡವರು ಹೆಚ್ಚಿದ್ದು ವೀರಶೈವ ಲಿಂಗಾಯತರ ಏಳಿಗೆಗೆ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಜೊತೆಗೆ ಹಿಂದುಳಿದ ವರ್ಗದ ಪ್ರವರ್ಗ-2ಎ ಸ್ಥಾನಮಾನ ನೀಡುವಂತೆಯೂ ಯಡಿಯೂರಪ್ಪಗೆ ಮನವಿ ಮಾಡಿದರು.
ಬಸವಕಲ್ಯಾಣ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ 50 ಕೋಟಿ ರೂಪಾಯಿಗಳನ್ನು ಪ್ರಾಧಿಕಾರಕ್ಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಮರಾಠ ಪ್ರಾಧಿಕಾರ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಮೀಸಲಾತಿ ಒದಗಿಸುವಂತೆ ಒತ್ತಾಯಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.