'ಯತ್ನಾಳ್​ ಸುಮ್ನೆ ಬುರುಡೆ ಬಿಡ್ತಾರೆ.. ಅವರ ಮಾತು ತೋಳ ಬಂತು ತೊಳ, ನಾಳೆ ಬಾ ಹಾಗೆ ಆಗಿದೆ'

Published : Jan 31, 2021, 08:10 PM ISTUpdated : Jan 31, 2021, 08:30 PM IST
'ಯತ್ನಾಳ್​ ಸುಮ್ನೆ ಬುರುಡೆ ಬಿಡ್ತಾರೆ.. ಅವರ ಮಾತು ತೋಳ ಬಂತು ತೊಳ, ನಾಳೆ ಬಾ ಹಾಗೆ ಆಗಿದೆ'

ಸಾರಾಂಶ

ಸದಾ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಕಿ ಕಾರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸಚಿವ ಬಿಸಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.

ದಾವಣಗೆರೆ, (ಜ.31): ಬಿಜೆಪಿ ಶಾಸಕ ಯತ್ನಾಳ್​ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾತು ತೋಳ ಬಂತು ತೊಳ ಮತ್ತು ನಾಳೆ ಬಾ ಅಂತಾರಲ್ಲ ಹಾಗೆ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಲೇವಡಿ ಮಾಡಿದ್ದಾರೆ.

ಇಂದು (ಭಾನುವಾರ) ದಾವಣಗೆರೆಯಲ್ಲಿ ಮತನಾಡಿದ ಬಿ.ಸಿ.ಪಾಟೀಲ್, ಬಸನಗೌಡ ಪಾಟೀಲ್​ ಯತ್ನಾಳ್​ ಸುಮ್ಮನೆ ಬುರುಡೆ ಬಿಡ್ತಾರೆ. ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಬಿಎಸ್​ವೈ ಸಿಎಂ ಆಗಿರ್ತಾರೆಂದು ಅಮಿತ್ ಶಾ ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್​ ಸುಮ್ಮನೆ ಹೇಳುತ್ತಿರುತ್ತಾರೆ ಎಂದು ಹೇಳಿದರು.

'ಯುಗಾದಿಯ ಹೊಸ ವರ್ಷಕ್ಕೆ ಹೊಸ ಸಿಎಂ ಬಂದೇ ಬರ್ತಾರೆ, ನೋಡ್ತಾ ಇರಿ'

ರಾಜ್ಯ ಬಿಜೆಪಿಯಲ್ಲಿ ಅಂತಹ ಯಾವುದೇ ಬೆಳವಣಿಗೆ ಆಗಿಲ್ಲ. ತೋಳ ಬಂತು ತೋಳ ಅಂತಾರಲ್ಲ ಹಾಗಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರ ಒಳ್ಳೆಯ ಬಜೆಟ್ ನೀಡುವ ನಿರೀಕ್ಷೆಯಿದೆ. ಡಬಲ್​ ಇಂಜಿನ್ ಸರ್ಕಾರವೆಂದು ಅಮಿತ್ ಶಾ ಹೇಳಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒತ್ತು ನೀಡುವ ಸಾಧ್ಯತೆಯಿದೆ ಎಂದು ಬಿ.ಸಿ.ಪಾಟೀಲ್​ ಹೇಳಿದರು. ಕೃಷಿ ಕ್ಷೇತ್ರದ ಬೇಡಿಕೆ ಬಗ್ಗೆ ಈಗಾಗಲೇ ವರದಿ ಸಲ್ಲಿಸಿದ್ದೇವೆ. ಈ ಬಾರಿ ರಾಜ್ಯದಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ