ಕರ್ನಾಟಕದಲ್ಲೂ ಯುವಕರಿಗೆ ಮನ್ನಣೆ ಹೈಕಮಾಂಡ್‌ಗೆ ಬಿಟ್ಟದ್ದು: ಸಚಿವ ಭೈರತಿ

Published : Dec 10, 2022, 10:30 PM IST
ಕರ್ನಾಟಕದಲ್ಲೂ ಯುವಕರಿಗೆ ಮನ್ನಣೆ ಹೈಕಮಾಂಡ್‌ಗೆ ಬಿಟ್ಟದ್ದು: ಸಚಿವ ಭೈರತಿ

ಸಾರಾಂಶ

ದೇಶದ ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿರುವ ಪ್ರಧಾನಿ ದೇಶದ ಸುಭದ್ರತೆಯ ದೃಷ್ಟಿಯಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ: ಸಚಿವ ಭೈರತಿ ಬಸವರಾಜ 

ಬಾಗಲಕೋಟೆ(ಡಿ.10):  ಗುಜರಾತ ಮಾದರಿಯಂತೆ ಕರ್ನಾಟಕದಲ್ಲೂ ಹಿರಿಯರಿಗೆ ಪಕ್ಷದ ಜವಾಬ್ದಾರಿ ಕೊಟ್ಟು ಯುವಕರಿಕೆ ಮನ್ನಣೆ ನೀಡಲಾಗುತ್ತದೆ ಎಂಬ ಸುದ್ದಿ ಇದೆ. ಆದರೆ, ಅದು ಯಾವ ರೀತಿ ಜಾರಿಯಾಗಲಿದೆ ಎಂಬುದು ಪಕ್ಷದ ಹೈಕಮಾಂಡ್‌ ವಿವೇಚನೆಗೆ ಬಿಟ್ಟದ್ದು ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜ ಹೇಳಿದರು.

ಜಿಲ್ಲೆಯ ಇಳಕಲ್‌ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಗುಜರಾತ್‌ ಮಾದರಿ ರೀತಿಯಲ್ಲಿಯೇ ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಹಿರಿಯರಿಗೆ ಟಿಕೆಟ್‌ ಸಿಗದೇ ಇರುವ ಭಯ ಕಾಡುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೀಘ್ರದಲ್ಲಿಯೇ ಉತ್ತರ ದೊರೆಯಲಿದೆ. ಈ ನಿಟ್ಟಿನಲ್ಲಿ ನಾವು ಸ್ವಲ್ಪ ದಿನಗಳವರೆಗೆ ಕಾದು ನೋಡಬೇಕು. ಇದರಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ತಿಳಿಸಿದರು.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಸೋಲಿಗೆ ಆಮ್‌ ಆದ್ಮಿ ಪಕ್ಷವೇ ಕಾರಣ: ಸತೀಶ ಜಾರಕಿಹೊಳಿ

ಪ್ರಧಾನಿ ಮೋದಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು. ಆದರೆ, ಅಮೆರಿಕ ಅಧ್ಯಕ್ಷರೇ ಪ್ರಧಾನಿ ಮೋದಿಗೆ ನಮಸ್ಕರಿಸುವ ಮಟ್ಟಕ್ಕೆ ಬಂದಿರುವುದನ್ನು ಸಹ ಅವರು ಗಮನಿಸಬೇಕಿದೆ. ದೇಶದ ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿರುವ ಪ್ರಧಾನಿ ದೇಶದ ಸುಭದ್ರತೆಯ ದೃಷ್ಟಿಯಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ