ಕೃಷಿ ಜೊತೆ ಹೈನುಗಾರಿಕೆಯಿಂದ ರೈತರಿಗೆ ಸ್ವಾವಲಂಬಿ ಬದುಕು:ಕೃಷಿ ಸಚಿವ ಚಲುವರಾಯಸ್ವಾಮಿ

Published : Mar 10, 2026, 09:57 PM IST
Cheluvarayaswamy

ಸಾರಾಂಶ

ಕೃಷಿ ಜೊತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ ರೈತರು ಮತ್ತು ರೈತ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ನಾಗಮಂಗಲ(ಮಾ.10): ಕೃಷಿ ಜೊತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ ರೈತರು ಮತ್ತು ರೈತ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಚೋಳಸಂದ್ರ ಮತ್ತು ದೊಡ್ಡಾಘಟ್ಟ ಗ್ರಾಮದಲ್ಲಿ ಸ್ಥಾಪಿಸಿರುವ ಮಹಿಳಾ ನೂತನ ಡೈರಿ ಉದ್ಘಾಟಿಸಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶದ ರೈತರಿಗೆ ಉಳಿದೆಲ್ಲಾ ಸಂಪನ್ಮೂಲಕ್ಕಿಂತ ಹೈನುಗಾರಿಕೆ ಆರ್ಥಿಕವಾಗಿ ಹೆಚ್ಚು ಶಕ್ತಿ ಕೊಡುತ್ತದೆ ಎಂದು ಹೇಳಿದರು.

ರೈತರು ಕೃಷಿ ಜೊತೆಗೆ ಒಂದೆರಡು ಜಾನುವಾರು ಸಾಕುವುದರಿಂದ ಕುಟುಂಬ ನಿರ್ವಹಣೆಗೆ ಹಣಕಾಸಿನ ನೆರವು ಒದಗಿಸುತ್ತದೆ. ಸರ್ಕಾರ ಕೂಡ ಪ್ರತಿ ಲೀಟರ್ ಹಾಲಿಗೆ 5 ರು. ಪ್ರೋತ್ಸಾಹ ಧನ ನೀಡುತ್ತಿರುವುದು ರೈತರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ರೈತರು ಉತ್ಪಾದಿಸುವ ಹಾಲನ್ನು ಸ್ಥಳೀಯವಾಗಿಯೇ ಶೀತಲೀಕರಿಸಿ ಹಾಲಿನ ಗುಣಮಟ್ಟ ಕಾಪಾಡಲು ತಾಲೂಕಿನಲ್ಲಿ 50ಕ್ಕೂ ಹೆಚ್ಚು ಬಿಎಂಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಮತ್ತು ಜಿಲ್ಲಾ ಹಾಲು ಒಕ್ಕೂಟ ರೈತಪರವಾಗಿದೆ. ಹೈನುಗಾರಿಕೆಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದು ಹೇಳಿದರು.

ನಂತರ ಕೊಕ್ಕರನಹೊಸಹಳ್ಳಿ ಹಾಗೂ ಕಂಚನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆನೆರವೇರಿಸಿದರು. ಕೆಎಂಎಫ್ ನಿರ್ದೇಶಕ ಎನ್. ಅಪ್ಪಾಜಿಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಎನ್.ಟಿ. ಕೃಷ್ಣಮೂರ್ತಿ, ದೊಡ್ಡಾಘಟ್ಟ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಡಿ.ಜಿ.ಕಾವ್ಯ, ಉಪಾಧ್ಯಕ್ಷೆ ಜಿ.ಎಸ್. ಭವ್ಯ, ಕಾರ್ಯದರ್ಶಿ ಕೆ. ಸುಪ್ರಿಯಾ, ನಿರ್ದೇಶಕರಾದ ದಿವ್ಯ, ನಾಗಮ್ಮ, ಪವಿತ್ರ, ಮಹಾಲಕ್ಷ್ಮಿ, ನಾಗಮ್ಮ, ಚೈತ್ರ ಮುಖಂಡರಾದ ಮೂರ್ತಿ, ರಾಮಚಂದ್ರ, ಶೇಖರ್ ಸೇರಿದಂತೆ ಮನ್ಮುಲ್ ನಾಗಮಂಗಲ ಉಪ ವಿಭಾಗದ ಅಧಿಕಾರಿಗಳು ಇದ್ದರು.

ಆಹಾರ ಪದಾರ್ಥ ನೇರ ಮಾರಾಟದಿಂದ ಅಧಿಕ ಲಾಭ

ರೈತರು ಆಹಾರ ಪದಾರ್ಥಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ನೇರ ಮಾರಾಟ ಮಾಡಿದರೆ ಅಧಿಕ ಲಾಭ ಪಡೆಯಬಹುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಆರಣಿ ಗ್ರಾಮದಲ್ಲಿ ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಆಯೋಜಿಸಿದ್ದ ಜಲಾನಯನ ಮೇಳ ಉದ್ಘಾಟಿಸಿ ಮಾತನಾಡಿದ ಸಚಿವರು, ಜಲ, ಮಣ್ಣಿನ ಸಂರಕ್ಷಣೆ ಹಾಗೂ ಭೂ ಸಂಪನ್ಮೂಲಗಳ ಸಮರ್ಥ ಬಳಕೆಗೆ ಜಲಾನಯನ ಯೋಜನೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ರೈತರು ಬೆಳೆಯುವ ಆಹಾರ ಪದಾರ್ಥಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ನೇರ ಮಾರಾಟ ಮಾಡಿದರೆ ಅಧಿಕ ಲಾಭ ಪಡೆಯಬಹುದೆಂಬ ಕಾರಣಕ್ಕೆ ನಾನು ಕೃಷಿ ಸಚಿವನಾದ ನಂತರ ಇಡೀ ರಾಷ್ಟ್ರದಲ್ಲಿ ಮೊದಲ ಬಾರಿಗೆ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ರೈತರು ಈ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಲಾನಯನ ಯೋಜನೆಗೆ ಆರಣಿ ಗ್ರಾಪಂ ವ್ಯಾಪ್ತಿಯ ಸಿದ್ದಾಪುರ, ಮಣಿಯೂರು, ಹೊನ್ನೇನಹಳ್ಳಿ, ಮೈಲನಹಳ್ಳಿ, ಅಣಕನಹಳ್ಳಿ, ತಿಗಳನಹಳ್ಳಿ, ಎಂ.ಕೋಡಿಹಳ್ಳಿ, ಬಣ್ಣದಹಳ್ಳಿ, ಮಂಚೇನಹಳ್ಳಿ, ಕಂಚನಹಳ್ಳಿ ಹಾಗೂ ಚುಂಚನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಒಟ್ಟು 2838 ಹೆಕ್ಟೇರ್ ಪ್ರದೇಶ ಸೇರುತ್ತವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಾವಣಗೆರೆ ಉಪಚುನಾವಣೆ ಟಿಕೆಟ್ ಹೈಕಮಾಂಡ್ ನಿರ್ಧಾರ: ಸಚಿವ ಜಮೀರ್‌ ಅಹಮದ್‌ ತಿರುಗೇಟು
ಎ, ಬಿ ವರ್ಗದ ಆದಾಯ ಸಿ ವರ್ಗದ ದೇಗುಲ ಅಭಿವೃದ್ಧಿಗೆ ಬಳಕೆ: ಸಚಿವ ರಾಮಲಿಂಗಾರೆಡ್ಡಿ