ಕಾಂಗ್ರೆಸ್‌ನವರೇ ಡಿಕೆಶಿ ಕಲೆಕ್ಷನ್‌ ಗಿರಾಕಿ ಅಂದ ಮೇಲೆ ನಮ್ಮ ವಿಶ್ಲೇಷಣೇ ಏನಿದೆ?: ಸಚಿವ ಅಶ್ವತ್ಥ್‌

Kannadaprabha News   | Asianet News
Published : Oct 14, 2021, 03:19 PM IST
ಕಾಂಗ್ರೆಸ್‌ನವರೇ ಡಿಕೆಶಿ ಕಲೆಕ್ಷನ್‌ ಗಿರಾಕಿ ಅಂದ ಮೇಲೆ ನಮ್ಮ ವಿಶ್ಲೇಷಣೇ ಏನಿದೆ?: ಸಚಿವ ಅಶ್ವತ್ಥ್‌

ಸಾರಾಂಶ

* ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ. ಕಾನೂನು ಪಾಲಿಸಲಾಗುತ್ತಿದೆ *  ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ಹಂಚಿಕೆ ಸಿಎಂ ನಿಶ್ಚಯಿಸುತ್ತಾರೆ * ಸಿದ್ದು, ಎಚ್‌ಡಿಕೆ ಆರೋಪ, ಪ್ರತ್ಯಾರೋಪಕ್ಕೆ ನಾನೇನು ಪ್ರತಿಕ್ರಿಯಿಸುವುದಿಲ್ಲ    

ಬೆಳಗಾವಿ(ಅ.14):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ(DK Shivakumar) ಕಲೆಕ್ಷನ್‌ ಗಿರಾಕಿ ಎಂದು ಕಾಂಗ್ರೆಸ್‌(Congress) ನಾಯಕರೇ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಹೇಳಿದ ಮೇಲೆ ನಮಗೇನಿದೆ ಕೆಲಸ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ(CN Ashwathnarayan) ಹೇಳಿದ್ದಾರೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಹೇಳಿಕೆ ಕೊಟ್ಟ ಮೇಲೆ ವಿಶ್ಲೇಷಣೆ ಮಾಡುವುದಕ್ಕೆ ಅವಕಾಶವೇ ಇಲ್ಲ. ಅವರ ಪಕ್ಷದವರೇ ಹೇಳಿದ್ದಾರೆಂದರೆ ಅರ್ಥ ಮಾಡಿಕೊಳ್ಳಿ ಯಾವ ಪರಿಸ್ಥಿತಿಯಿದೆ ಎಂದರು.

ಬೆಂಗಳೂರು(Bengaluru) ಉಸ್ತುವಾರಿ ಸಚಿವ ಸ್ಥಾನ ಹಂಚಿಕೆಯನ್ನು ಮುಖ್ಯಮಂತ್ರಿಗಳೇ(Chief Minister) ನಿಶ್ಚಯಿಸುತ್ತಾರೆ. ಅವರೇ ಮುಂದುವರೆಯುತ್ತಾರೋ ಅಥವಾ ಬೇರೆಯವರಿಗೆ ಅವಕಾಶ ಕೊಡುತ್ತಾರೋ ಎಂಬುದನ್ನು ಕಾದು ನೋಡಬೇಕು. ಈ ವಿಚಾರವಾಗಿ ಸಿಎಂ ಎಲ್ಲರ ಜೊತೆಗೆ ಸಮಾಲೋಚನೆ ಮಾಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳು ಉಸ್ತುವಾರಿ ಜವಾಬ್ದಾರಿ ನನಗೆ ನೀಡಿದರೆ ಖಂಡಿತವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ರಮೇಶ ನಮ್ಮ ನಾಯಕ:

ಗೋಕಾಕ(Gokak) ಶಾಸಕ ರಮೇಶ ಜಾರಕಿಹೊಳಿ(Rameshn Jarkiholi) ನಮ್ಮ ನಾಯಕರು. ಎಲ್ಲ ರೀತಿಯಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಭಾವನೆಗೆ ಪೂರಕವಾಗಿ ಪಕ್ಷದಲ್ಲಿ ನಡೆದುಕೊಳ್ಳುತ್ತೇವೆ. ಅವರಿಗೆ ನೋವಾಗಿದೆ. ಅದು ಸಹಜ. ಆದರೆ ಅವರು ನಮ್ಮ ನಾಯಕರು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಎಲ್ಲಾ ಪ್ರಯತ್ನಗಳು ನಮ್ಮ ಪಕ್ಷದಲ್ಲಾಗುತ್ತದೆ. ಅವರ ಸಹಕಾರ, ಕಾರ್ಯವನ್ನು ಪಕ್ಷ ಯಾವಾಗಲೂ ಸ್ಮರಿಸುತ್ತದೆ ಎಂದು ಹೇಳಿದರು.

ಸರ್ಕಾರದಿಂದ(Government) ಐಟಿ(Income Tax) ದುರ್ಬಳಕೆಯಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ. ಕಾನೂನು ಪಾಲಿಸಲಾಗುತ್ತಿದೆ. ಯಾರೇ ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಆರೋಪ, ಪ್ರತ್ಯಾರೋಪಕ್ಕೆ ನಾನೇನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?