ರಾಸಲೀಲೆ ವಿಡಿಯೋ ಹಿಂದೆ ಕನಕಪುರ, ಬೆಳಗಾವಿಯ ಷಡ್ಯಂತ್ರ: ಹೊಸ ಬಾಂಬ್

Published : Mar 06, 2021, 02:12 PM ISTUpdated : Mar 06, 2021, 02:13 PM IST
ರಾಸಲೀಲೆ ವಿಡಿಯೋ ಹಿಂದೆ ಕನಕಪುರ, ಬೆಳಗಾವಿಯ ಷಡ್ಯಂತ್ರ: ಹೊಸ ಬಾಂಬ್

ಸಾರಾಂಶ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಟಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ವಿರುದ್ಧದ ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಿಡಿ ಪ್ರಕರಣಕ್ಕೆ ಕನಕಪುರ ಮತ್ತು ಬೆಳಗಾವಿ ಕಡೆಯವರು ಕಾರಣ. ಈ ವಿಡಿಯೋ ಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ‌ ಪ್ರಕರಣದಲ್ಲಿ ರಾಜಕೀಯ ಪಿತೂರಿ ನಡೆದಿದೆ. ರಾಜಕೀಯ ಷಂಡ್ಯಂತ್ರದಿಂದ ನಡೆದಿದೆ. ಈ ವಿಚಾರದಲ್ಲಿ ನನ್ನನ್ನು ಎಳೆಯಬೇಡಿ ಎಂದು ಯೋಗೇಶ್ವರ್ ಹೇಳಿದರು.

ಆರು‌ ಜನ ಸಚಿವರು ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಗೊತ್ತಿಲ್ಲ. ಆ ಸಚಿವರನ್ನೇ ಕೇಳಬೇಕು. ಅವರ ವೈಯಕ್ತಿಕ ರಕ್ಷಣೆಗೆ ಕೋರ್ಟ್ ಮೊರೆ ಹೊಗಿರಬಹುದು. ಯಾರು ಕೋರ್ಟ್ ಮೊರೆ ಹೋಗಿದ್ದಾರೋ ಅವರನ್ನೇ ಕೇಳಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ