ಮೀಸಲಾತಿ ಹೋರಾಟ ಬಗ್ಗೆ ನನ್ನ ಬೆಂಬಲ ಇಲ್ಲ: ಸಚಿವ ಖಡಕ್ ಮಾತು

Published : Feb 20, 2021, 02:34 PM IST
ಮೀಸಲಾತಿ ಹೋರಾಟ ಬಗ್ಗೆ ನನ್ನ ಬೆಂಬಲ ಇಲ್ಲ: ಸಚಿವ ಖಡಕ್ ಮಾತು

ಸಾರಾಂಶ

ಮೀಸಲಾತಿಗಾಗಿ ವಿವಿಧ ಸಮುದಾಯಗಳು ಹೋರಾಟ ಮಾಡುವ ಮೂಲಕ ಸರ್ಕಾರಗಳ ಮೇಲೆ ಒತ್ತಡ ಹೇರುತ್ತಿವೆ. ಇದರ ಮಧ್ಯೆ ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು, (ಫೆ.20): ಮೀಸಲಾತಿಗಾಗಿ ಒಕ್ಕಲಿಗರ ಸಮುದಾಯದ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮೀಸಲಾತಿ ಹೋರಾಟ ಬಗ್ಗೆ ನನ್ನ ಬೆಂಬಲ ಇಲ್ಲ. ಮೀಸಲಾತಿ ಬಗ್ಗೆ ಎಲ್ಲಾ ಸಮುದಾಯಗಳು ಕೇಳುತ್ತಿವೆ. ಸಂವಿದಾನ ಚೌಕಟ್ಟಿನಲ್ಲೇ ಎಲ್ಲವೂ ಕೆಲಸ ಆಗಬೇಕು. ಹಲವಾರು ಬಾರಿ ಇಂಥಹ ಹೋರಾಟಗಳು ನಡೆದಿವೆ. ಇದ್ಯಾವುದಕ್ಕೂ ಅರ್ಥವಿಲ್ಲ ಎಂದು ಹೇಳಿದರು.

ಮೀಸಲಾತಿಗೆ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧ: ಸಿಎಂಗೆ ಶುರುವಾಯ್ತು ಸಂಕಷ್ಟ

ಒಕ್ಕಲಿಗರು ನಾವ್ಯಾರು ಬೀದಿಗೆ ಬಂದು ಇಳಿದಿಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಒಂದು ಕಮಿಟಿ ರಚನೆಯಾಗಲಿದೆ. ನೋಡೋಣ ಮುಂದೆ ಏನಾಗುತ್ತೆ ಅಂತಾ. ನಿರ್ಮಲಾನಂದ ಶ್ರೀಗಳು ಕರೆದು ಚರ್ಚೆ ಮಾಡಿದ್ರೆ, ಅವರ ನಡೆಯನ್ನಾಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಈಗಾಗಲೇ ಒಕ್ಕಲಿಗ ಸಮುದಾಯ ಸಹ ಹಿಂದುಳಿದ ಮೀಸಲಾತಿ ಬೇಕೆಂದು ಆಗ್ರಹಿಸಿದೆ. ಇದಕ್ಕೆ ನಿರ್ಮಲಾನಂದ ಶ್ರೀಗಳು ಧ್ವನಿಗೂಡಿಸಿದ್ದು, ಮುಂದಿನ ದಿನಗಳಲ್ಲಿ ಹೋರಾಟಕ್ಕಿಳಿಯುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಘೋಷಣೆ
ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!