
ಮೈಸೂರು (ಮಾ.02): ಕುಮಾರಸ್ವಾಮಿ ಅವರು ನನ್ನ ಬಗ್ಗೆ ಬಹಳ ಕೇವಲವಾಗಿ ಮಾತಾಡುತ್ತಾರೆ. ನಾನು ನನ್ನ ರಾಜಕೀಯ ಅಸ್ತಿತ್ವಕ್ಕೆ ಹೋರಾಟ ,ಮಾಡುತ್ತಿದ್ದೇನೆ. ಕುಮಾರಸ್ವಾಮಿ ಏನೇ ಮಾತಾಡಿದರು ನಾನು ವೈಯಕ್ತಿಕವಾಗಿ ಹೇಳಿಕೆ ಕೊಡಲ್ಲ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿಂದು ಮಾತನಾಡಿದ ಸಚಿವ ಸಿಪಿ ಯೋಗೇಶ್ವರ್ ಕುಮಾರಸ್ವಾಮಿ ಅವರ ರಾಜಕೀಯ ಧೋರಣೆ ಮಾತ್ರ ವಿರೋಧ ಮಾಡುತ್ತಾ ಇದ್ದೇನೆ. ಪರಿಷತ್ನಲ್ಲಿ ಬಿಜೆಪಿ ಜೊತೆ, ಮೈಸೂರಲ್ಲಿ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತಾ. ಅವರ ಈ ಇಬ್ಬಂಧಿತನದ ನೀತಿಯನ್ನ ಮಾತ್ರ ನಾನು ವಿರೋಧ ಮಾಡುತ್ತಿದ್ದೇನೆ ಎಂದರು.
ನನ್ನ ತಾಳ್ಮೆ ಕಟ್ಟೆ ಹೊಡೆದಿದೆ: ಮತ್ತೆ ಎಚ್ಡಿಕೆ ವಿರುದ್ಧ ಸಚಿವರ ಮಾತಿನ ಸಮರ .
ನನ್ನ ಹೇಳಿಕೆ ತಪ್ಪು ಎಂದರೆ ನಾನೇನು ಮಾಡಲು ಆಗುವುದಿಲ್ಲ. ದಿನೆ ದಿನೆ ಜೆಡಿಎಸ್ ಜನಾಭಿಪ್ರಾಯ ಕಳೆದುಕೊಂಡಿದೆ. ಮಂಡ್ಯ ಹಾಗೂ ತುಮಕೂರಿನಲ್ಲಿ ಸೋತಾಗ ಅವರಿಗೆ ಅದು ಗೊತ್ತಾಗಿದೆ. ಬಿಜೆಪಿಯ ಸಚಿವರ ಮನೆ ಬಾಗಿಲಿಗೆ ಜೆಡಿಎಸ್ನವರು ಅಲೆದಾಡುತ್ತಿದ್ದಾರೆ. ಸಿಎಂ ಕೂಡ ಅವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಇಂತಹ ವಿಚಾರವನ್ನು ನಾನು ಪಕ್ಷದ ವೇದಿಕೆಯಲ್ಲಿ ಮಾತಾಡುತ್ತೇನೆ ಅಷ್ಟೇ ಎಂದು ಜೆಡಿಎಸ್ ಮುಖಂಡರ ವಿರುದ್ಧ ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.