
ಚಿಕ್ಕಮಗಳೂರು, (ಸೆ.28): ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಚಿವ ಸಿ.ಟಿ.ರವಿ ದತ್ತ ಪಾದುಕೆ ದರ್ಶನ ಮಾಡಲು ಬಾಬಾಬುಡನ್ ಗಿರಿಯ ಸ್ವಾಮಿ ದರ್ಗಾಗೆ ತೆರಳಿದ್ದು, ದರ್ಗಾದಲ್ಲಿ ಫೋಟೊ ತೆಗೆಸಿಕೊಂಡು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆ ಇಂದು (ಸೋಮವಾರ) ಸಚಿವ ಸಿ.ಟಿ.ರವಿ ಅವರು ದತ್ತಪೀಠಕ್ಕೆ ತೆರಳಿದ್ದರು. ಇದೇ ವೇಳೆ ಅಲ್ಲಿ ಅವರ ಬೆಂಬಲಿಗರು, ಸಿಟಿ ರವಿ ಅವರು ನಮಸ್ಕಾರ ಮಾಡುತ್ತಿರುವ ಅವರ ಫೋಟೊವನ್ನು ಕ್ಲಿಕ್ಕಿ ಮಾಡಿದ್ದಾರೆ. ಸಚಿವರು ದರ್ಗಾದಲ್ಲಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಬಿಜೆಪಿಯಲ್ಲಿ ಬಿಗ್ ಚೇಂಜ್: ರಾಜ್ಯ ನಾಯಕರಿಗೆ ಹೈಕಮಾಂಡ್ ಭರ್ಜರಿ ಗಿಫ್ಟ್
ಸದ್ಯ ಇನಾಂ ದತ್ತಪೀಠದ ವಿಚಾರ ಕೋರ್ಟ್ ನಲ್ಲಿದ್ದು, ಯಾವುದೇ ಫೋಟೊ, ವಿಡಿಯೋ ಮಾಡದಂತೆ ಕೋರ್ಟ್ ಆದೇಶಿಸಿದೆ. ಆದರೆ, ಸಿ.ಟಿ.ರವಿ ದತ್ತಪೀಠದ ಒಳಗೆ ಇರುವ ಫೋಟೊ, ವಿಡಿಯೋ ತೆಗೆಸಿಕೊಂಡಿದ್ದು, ಆ ಫೋಟೊಗಳನ್ನು ವಾಟ್ಸಪ್ ಗ್ರೂಪನಲ್ಲಿ ಶೇರ್ ಮಾಡಿ, ನಂತರ ಅವರು ಅವೆಲ್ಲವನ್ನೂ ಡಿಲೀಟ್ ಮಾಡಿದ್ದಾರೆ. ಇದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.