ಸಿದ್ದು ಸಿಎಂ ಇದ್ದಾಗ ಮತ್ತೊಬ್ಬರ ಚರ್ಚೆಯೇ ಅಪ್ರಸ್ತುತ: ಸಚಿವ ಗುಂಡೂರಾವ್

Published : Jun 29, 2024, 10:44 AM IST
ಸಿದ್ದು ಸಿಎಂ ಇದ್ದಾಗ ಮತ್ತೊಬ್ಬರ ಚರ್ಚೆಯೇ ಅಪ್ರಸ್ತುತ: ಸಚಿವ ಗುಂಡೂರಾವ್

ಸಾರಾಂಶ

ಸಿದ್ದರಾಮಯ್ಯ ದೇಶದಲ್ಲೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಅವರು ಮುಖ್ಯಮಂತ್ರಿ ಆಗಿದ್ದಾಗ ಇನ್ನೊಬ್ಬರು ಮುಖ್ಯಮಂತ್ರಿ ಆಗುವ ಬಗ್ಗೆ ಚರ್ಚೆ ಮಾಡೋದು ಅಪ್ರಸ್ತುತ, ಅನಾವಶ್ಯಕ, ಅನಗತ್ಯ ಎಂದು ಹೇಳಿದ ಸಚಿವ ದಿನೇಶ್‌ ಗುಂಡೂರಾವ್ 

ಬಾಗಲಕೋಟೆ(ಜೂ.29): ಒಬ್ಬ ಮುಖ್ಯಮಂತ್ರಿ ಇದ್ದಾಗ ಇನ್ನೊಬ್ಬರು ಆಗಬೇಕು ಎನ್ನುವುದು ಸರಿಯಲ್ಲ. ಅದು ಆಗಲೂಬಾರದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಪ್ರತಿಪಾದಿಸಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ದೇಶದಲ್ಲೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಅವರು ಮುಖ್ಯಮಂತ್ರಿ ಆಗಿದ್ದಾಗ ಇನ್ನೊಬ್ಬರು ಮುಖ್ಯಮಂತ್ರಿ ಆಗುವ ಬಗ್ಗೆ ಚರ್ಚೆ ಮಾಡೋದು ಅಪ್ರಸ್ತುತ, ಅನಾವಶ್ಯಕ, ಅನಗತ್ಯ ಎಂದು ಹೇಳಿದ್ದಾರೆ. 

ನೀಟ್ ಬಗ್ಗೆ ಅಧ್ಯಯನ ಬೇಕೇ? ಬೇಡವೇ ಚರ್ಚೆಯಾಗಲಿ: ಸಚಿವ ದಿನೇಶ್ ಗುಂಡೂರಾವ್

ಸಿಎಂ ಅನ್ನು ಹೈಕಮಾಂಡ್ ಚರ್ಚಿಸಿಯೇ ಮಾಡುತ್ತದೆ. ಇದೆಲ್ಲಾ ಆಂತರಿಕ ವಿಚಾರ. ಬಹಿರಂಗ ಚರ್ಚೆ ಅನಗತ್ಯ. ವಿನಾ ಕಾರಣ ಚರ್ಚೆ ಆಗುತ್ತಿದೆ, ಆಗಬಾರದು. ಈ ಚರ್ಚೆಯಿಂದ ಯಾರಿಗೂ ಒಳ್ಳೆಯದಲ್ಲ. ನಮಗೂ, ಜನರಿಗೂ ಮತ್ತು ರಾಜ್ಯಕ್ಕೂ ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!