
ಬೆಂಗಳೂರು, (ಮಾ.24) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.
ಬೆಂಗಳೂರು, (ಮಾ.24): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ವಾಗ್ವಾದ ಮುಂದುವರಿದಿದೆ. ಈ ಮಧ್ಯೆ 'ಏಕಪತ್ನಿ ವ್ರತಸ್ಥರು ಯಾರಿದ್ದಾರೆ' ಎಂದು ಸವಾಲು ಹಾಕಿರುವ ವೈದ್ಯಕೀಯ ಸಚಿವ ಡಾ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.
ಸಚಿವ ಸುಧಾಕರ್ ಹೇಳಿದ 'ಅನೈತಿಕ ಸಂಬಂಧ': ಅಸಮಾಧಾನ ಹೊರಹಾಕಿದ ಶಾಸಕಿಯರು!
ಅದರಲ್ಲೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಹ ಸುಧಾಕರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಎಚ್ಚೆತ್ತ ಸುಧಾಕರ್ ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.
ಈ ವಿವಾದ ಇದೀಗ ಭಾರಿ ಕೋಲಾಹಲ ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸುಧಾಕರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದನ್ನು ಅರಿತ ಸಿಎಂ, ಸುಧಾಕರ್ ಅವರನ್ನು ಕಚೇರಿಗೆ ಕರೆಯಿಸಿಕೊಂಡು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!
ಸುಧಾಕರ್ ಟ್ವೀಟ್
ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.
ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.