ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...!

Published : Jun 22, 2020, 03:25 PM ISTUpdated : Jun 22, 2020, 05:31 PM IST
ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...!

ಸಾರಾಂಶ

ರಾಜ್ಯದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವಲ್ಲಿ ಹಗಲಿರುಳು ಕೆಲಸ ಮಾಡುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ಮನೆಗೂ ಕೊರೋನಾ ಕಾಲಿಟ್ಟಿದೆ.

ಬೆಂಗಳೂರು, (ಜೂನ್.22): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಮನೆ ಕೆಲಸದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ದೃಢವಾಗಿದ್ದು, ಸಚಿವರ ಕುಟುಂಬಕ್ಕೆ ಕೊರೋನಾ ಭೀತಿ ಶುರುವಾಗಿದೆ.

"

ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಅವರು ಇಂದು (ಸೋಮವಾರ) ಕರೆದ ಸಭೆಗೆ ಹೋಗದೇ ಗೈರಾಗಿದ್ದು, ಮತ್ತೊಮ್ಮೆ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಲು ತೀರ್ಮಾನಿಸಿದ್ದಾರೆ.

ಕೊರೋನಾ ಭೀತಿ: ಕರ್ನಾಟಕದ ಇಬ್ಬರು ಸಚಿವರು, ಓರ್ವ ಶಾಸಕ ಬಚಾವ್

ಇನ್ನು ಗುಟ್ಟಹಳ್ಳಿಯ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿದ್ದು, ಯಾರೆಲ್ಲ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರು ಎಂಬ ಮಾಹಿತಿ ಪಡೆದು ತೆರಳಿದರು.

ಈ ಹಿಂದೆ ಕೊರೋನಾ ಸೋಂಕಿತ ಕನ್ನಡ ಖಾಸಗಿ ಸುದ್ದಿ ವಾಹಿನಿ ಕ್ಯಾಮರಾಮನ್‌ ಸಂಪರ್ಕದಲ್ಲಿದ್ದ ಸುಧಾಕರ್ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದರು. ಅಲ್ಲದೇ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದಿತ್ತು. ಇದೀಗ ತಮ್ಮ ಮನೆಯ ಅಡುಗೆ ಭಟ್ಟನಿಗೆ ಕೊರೋನಾ ಇರುವುದರಿಂದ ಮತ್ತೊಮ್ಮೆ ಹೋಮ್ ಕ್ವಾರಂಟೈನ್‌ ಆಗಲು ನಿರ್ಧರಿಸಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!