'ಕೈ ನಾಯಕರ ಕತೆ ರೋಮ್ ರಾಜನ ಸ್ಥಿತಿಯಾಗಿದೆ ಭರ್ಜರಿ ಬಯಲು ನಾಟಕ'

Published : May 05, 2020, 03:20 PM ISTUpdated : May 05, 2020, 03:28 PM IST
'ಕೈ ನಾಯಕರ ಕತೆ ರೋಮ್ ರಾಜನ ಸ್ಥಿತಿಯಾಗಿದೆ ಭರ್ಜರಿ ಬಯಲು ನಾಟಕ'

ಸಾರಾಂಶ

ಕಾಂಗ್ರೆಸ್ ವಿರುದ್ಧ ಸುಧಾಕರ್ ಕೆಂಡಾಮಂಡಲ/ ಈ ಸಮಯದಲ್ಲಿಯೂ ರಾಜಕಾರಣವೇ ಮುಖ್ಯ ಆಯ್ತಾ/  ಪ್ರಚಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ/ ಕಾಂಗ್ರೆಸ್ ನವರ ಕತೆ ರೋಮ್ ರಾಜನ ಪರಿಸ್ಥಿತಿಯಾಗಿದೆ.

ಬೆಂಗಳೂರು(ಮೇ 05) ಕಾರ್ಮಿಕರ ಬಸ್ ಮತ್ತು ರೈಲಿನ ಚಾರ್ಜ್ ಕೊಡುತ್ತೇವೆ ಎಂದು ಕಾಂಗ್ರೆಸ್ ಈ ಸಮಯದಲ್ಲಿಯೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಸಚಿವ ಸುಧಾಕರ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ವ್ಯಂಗ್ಯ ವಾಗಿ ಟ್ವೀಟ್ ಮಾಡುವ ಮೂಲಕ ಆಕ್ರೋಶ  ಹೊರಹಾಕಿರುವ ಸುಧಾಕರ್, ಚಾರ್ಜ್ ಕೊಡುತ್ತೇನೆ ಎಂದು ಹೇಳುತ್ತ ರಸ್ತೆಯಲ್ಲಿ ಓಡಾಟ ಮಾಡುತ್ತಿದ್ದಾರೆ. ಅದರ ಜಾಹಿರಾತುಗಳನ್ನ ಕೊಟ್ಟಿರುವುದು ನೋಡಿದರೆ ಇದು ಭರ್ಜರಿ ಬಯಲುನಾಟಕ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್‌ನ 1 ಕೋಟಿ ಚೆಕ್ ನ ಅಸಲಿ-ನಕಲಿ ಕತೆ

ನಿಯಮದಂತೆ ಹಣ ಯಾರಿಗೆ ಕೊಡಬೇಕಿತ್ತೋ ಅವರಿಗೆ ಕೊಡಬೇಕು .  ಅದನ್ನ ಬಿಟ್ಟು ಊರೆಲ್ಲ ಕ್ಯಾಮೆರಾ ಮುಂದೆ ಕೊರೊನ ಮೀರುವ ಓಡಾಟ ,ಚೀರಾಟ ಮತ್ತು ಹಾರಾಟ ಮಾಡಬಾರದು. ಕೊರೋನಾ ವಿಷಯದಲ್ಲೂ ಕಾಂಗ್ರೆಸ್ ಗೆ  ರಾಜಕೀಯವೇ ಮುಖ್ಯವಾಗಿದೆ.

ತಮಗೆ ಮುಖ್ಯ ಮತ್ತು ಲಾಭ ಅನ್ನುವ ಇವರ ಮನಸ್ಥಿತಿಗೂ, ರೋಮ್ ನ ಅಂದಿನ ದೊರೆ ನೀರೋ ಗೂ ಇವರಿಗೂ ವ್ಯತ್ಯಾಸವಿಲ್ಲ. ರೋಮ್ ಹೊತ್ತಿ ಉರಿಯುತ್ತಿದ್ದರೆ ರಾಜ ಪೀಟೀಲು ನುಡಿಸುಯತ್ತ ಕುಳೀತಿದ್ದನಂತೆ... ಕಾಂಗ್ರೆಸ್ ನವರ ಸ್ಥಿತಿಯೂ ಹಾಗೆ ಆಗಿದೆ ಎಂದು ವ್ಯಂಗ್ಯದ ಚಾಟಿ ಬೀಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ