ಬಿಜೆಪಿ ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ: ಸಚಿವ ಸುಧಾಕರ್

Published : Dec 21, 2024, 11:01 AM IST
ಬಿಜೆಪಿ ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ: ಸಚಿವ ಸುಧಾಕರ್

ಸಾರಾಂಶ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸರ್ವಾಧಿಕಾರಿ ಆಡಳಿ ತದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಬಹಳ ಪ್ರಮುಖವಾಗಿದೆ: ಸಚಿವ ಡಾ.ಎಂ.ಸಿ. ಸುಧಾಕರ್

ಚಿಕ್ಕಬಳ್ಳಾಪುರ(ಡಿ.21): ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ. ಅದೊಂದೇ ಅವರ ಅಜೆಂಡಾ. ಈಗ ಅವರು ಪ್ರಜಾಸತ್ತಾತ್ಮಕ ಮೌಲ್ಯವನ್ನೇ ಹೈಜಾಕ್ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು ನೀಡಲಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಅಭಿಪ್ರಾಯಪಟ್ಟರು. 

ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಗರ ಹೊರವಲಯದ ಶ್ರೀಸಿಯರಾ ಹೋಟೆಲ್ ನಲ್ಲಿ ಬೆಳಗಾವಿಕಾಂಗ್ರೆಸ್‌ ಅಧಿವೇಶನದಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು. 

ಈಶ ಫೌಂಡೇಶನ್ ಮೈದಾನದಲ್ಲಿ ಗ್ರಾಮೋತ್ಸವದಲ್ಲಿ ಪಾಲ್ಗೊಂಡ ನಟಿ ಶ್ರೀನಿಧಿ ಶೆಟ್ಟಿ

ಮೋದಿ, ಶಾ ವಿರುದ್ಧ ಹೋರಾಟ: 

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸರ್ವಾಧಿಕಾರಿ ಆಡಳಿ ತದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಬಹಳ ಪ್ರಮುಖವಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಈ ಸಭೆಯನ್ನು ಯಶಸ್ವಿ ಗೊಳಿಸಲಿದ್ದು, ಡಿ. 26ರಂದು ಕಾಂಗ್ರೆಸ್ ಕಾರ್ಯ ಕಾರಿ ಸಮಿತಿ ಸಭೆ ನಡೆಯಲಿದೆ. ಡಿ.27 ರಂದು ಬೆಳಗ್ಗೆ 10-30 ಗಂಟೆಗೆ ಬೆಳಗಾವಿಯ ಎಐಸಿಸಿ ಶತಮಾನೋತ್ಸವ ಸಂಭ್ರಮದ ಐತಿಹಾಸಿಕ ಸಭೆ ನಡೆಯಲಿದೆ ಎಂದರು. 

ದೇಶ ಆಸ್ತಿ ಏಕವ್ಯಕ್ತಿ ಕೈಗೆ: 

ಪರಿಶಿಷ್ಟ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಸೇರಿ ಸಾಮಾನ್ಯ ವರ್ಗದ ಬಡವರಿಗೆ ರಕ್ಷಣೆ ಸಿಗಬೇಕು ಎಂಬ ಉದ್ದೇಶದಿಂದ ಜಾತಿಗಣತಿ ಬಗ್ಗೆ ಚರ್ಚೆ ನಡೆಯ ನಡೆಯಲಿದೆ. ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಲಾಗುತ್ತಿದೆ. ದೇಶದ ಎಲ್ಲಾ ಆಸ್ತಿಗಳು ಒಬ್ಬ ವ್ಯಕ್ತಿಯ ಕೈಗೆ ಸೇರು ತ್ತಿವೆ. ಹೀಗಾಗಿ ಸಮಾನತೆ ಎಂಬುದೇ ದೇಶದಲ್ಲಿ ಇಲ್ಲವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಸಂಸತ್ತಿನಲ್ಲಿ ನಡೆದಂತಹ ಡಾ. ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಹೀಯಾಳಿಸಿದ ಗೃಹ ಸಚಿವರ ಅಮಿತ್ ಶಾ ಅವರ ನಡೆಯನ್ನು ಖಂಡಿಸಿದರು. 

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ನಡೆದ ಸಿಟಿ ರವಿ ಪ್ರಕರಣದ ಬಗ್ಗೆ ಮಾತನಾಡಿ ಸಿ.ಟಿ. ರವಿ ರವರು ನಾನು ಒಟ್ಟಗೆ ವಿಧಾನ ಸಭೆ ಪ್ರವೇಶಿಸಿದೆವು. ಅವರು ಎತ್ತರಕ್ಕೆ ಬೆಳೆದರು, ಇಂತಹ ಕೀಳು ಮಟ್ಟಕ್ಕೆ ಮಾತನಾಡಬಾರದಿತ್ತು. ಅವರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು ಎಂದರು. 

ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮಕ್ಕೆ ಸಿದ್ದು ಮೆಚ್ಚುಗೆ: ಪ್ರದೀಪ್‌ ಈಶ್ವರ್‌ಗೆ ಅಭಿನಂದಿಸಿದ ಸಿಎಂ

ನಂದಿಬೆಟ್ಟಕ್ಕೆ ರೋಪ್ ವೇ: 

ನಂದಿಬೆಟ್ಟಕ್ಕೆ ಅತಿ ಶೀಘ್ರದಲ್ಲಿಯೇ ರೋಪ್ ವೇ ಅನ್ನು ಪರಿಸರಕ್ಕೆ ಹಾನಿ ಆಗದಂತೆ ನಿರ್ಮಾಣ ಮಾಡಲಾಗುವುದು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಇನ್ನೂ ಸಮಿತಿಗಳ ರಚನೆ ಆಗದಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಈಗಾಗಲೇ ಚಿಂತಾ ಮಣಿ ಬಾಗೇಪಲ್ಲಿ ತಾಲ್ಲೂಕುಗಳಲ್ಲಿ ಆಗಿದೆ ಶೀಘ್ರ ದಲ್ಲಿಯೇ ಚಿಕ್ಕಬಳ್ಳಾಪುರದಲ್ಲೂ ಸಮಿತಿಗಳ ರಚನೆ ಆಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಎನ್. ಕೇಶವ್ ರೆಡ್ಡಿ, ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ, ಅನಸೂಯಮ್ಮ, ಜಿ ಪಂ ಮಾಜಿ ಅಧ್ಯಕ್ಷ ಗಂಗರೆ ಕಾಲುವೆ ನಾರಾಯಣಸ್ವಾಮಿ. ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ನಂದಿ ಅಂಜನಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾದ ಕೆ.ಸಿ.ರಾಜಾಕಾಂತ್, ಮುನೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್, ಪರಿ ಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಿ.ಎನ್.ನಾರಾ ಯಣಸ್ವಾಮಿ, ಕಾರ್ಯದರ್ಶಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಜಯರಾಮ್. ಡಿವಿಆರ್‌ರಾಜೇಶ್, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡಗಲ್ ಶ್ರೀಧರ್,ಕೆಪಿಸಿಸಿ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಕೋನಪಲ್ಲಿ ಕೋದಂಡ, ನಗರಸಭೆ ಸದಸ್ಯ ಎಸ್. ಎಂ. ರಫೀಕ್, ವಕೀಲರಾದ ಶಾಹಿದ್, ವಿನೋದ್, ಮುಖಂಡರು ಗಳಾದ ಉಷಾ ಶ್ರೀನಿವಾಸ್ ಬಾಬು, ಮಮತಾ ಮೂರ್ತಿ, ಮಂಗಳ ಪ್ರಕಾಶ್, ನಾರಾಯಣಮ್ಮ, ಕೃಷ್ಣಪ್ಪ ನರೇಂದ್ರ ನಾರಾಯಣಸ್ವಾಮಿ, ಕೃಷ್ಣ ಮೂರ್ತಿ, ಏಜಾಜ್ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ