ಬಿಜೆಪಿಯವರು ವಚನ ಭ್ರಷ್ಟರು, ನಾವು ನುಡಿದಂತೆ ನಡೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

Published : Nov 03, 2024, 06:10 PM ISTUpdated : Nov 03, 2024, 06:11 PM IST
ಬಿಜೆಪಿಯವರು ವಚನ ಭ್ರಷ್ಟರು, ನಾವು ನುಡಿದಂತೆ ನಡೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

ಸಾರಾಂಶ

ಶಿಗ್ಗಾವಿ ಕ್ಷೇತ್ರದಲ್ಲಿ ಈವರೆಗೂ ಯಾವುದೇ ಅಭಿವೃದ್ಧಿ‌ ಕಾರ್ಯಗಳಾಗಿಲ್ಲ. ಬೊಮ್ಮಾಯಿ ಅವರು ಸಿಎಂ ಇದ್ದಾಗಲೂ ಇಲ್ಲಿ ಅಭಿವೃದ್ಧಿಗಳಾಗಿಲ್ಲ. ಬಿಜೆಪಿ ಕೊಟ್ಟ ಮಾತಿನಂತೆ ಎಂದೂ ನಡೆದುಕೊಂಡಿಲ್ಲ. ಬಿಜೆಪಿಯವರು ವಚನ ಭ್ರಷ್ಟರು. ನಾವು ನುಡಿದಂತೆ ನಡೆದಿದ್ದೇವೆ. ಜನತೆಗೆ ಕೊಟ್ಟ ಭರವಸೆಗಳನ್ನ ಈಡೇರಿಸಿದ್ದೇವೆ: ಸಚಿವ ಈಶ್ವರ ಖಂಡ್ರೆ 

ಹುಬ್ಬಳ್ಳಿ(ನ.03):  ಶಿಗ್ಗಾವಿ ಚುನಾವಣೆ ವಿಚಾರವಾಗಿ ಮೂರು ಉಸ್ತುವಾರಿಗಳ ಪ್ರಮುಖ ಮುಖಂಡರ ಸಭೆ ನಡೆಸಲಾಗಿದೆ. ಈ‌ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಸಚಿವರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ಆರು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಮೂರು ಪುರಸಭೆಗಳಿಗೆ ಸಚಿವರನ್ನು ನೇಮಿಸಲಾಗಿದೆ. ಎಲ್ಲರಲ್ಲೂ ಹುಮ್ಮಸ್ಸು ಹಾಗೂ ಒಗ್ಗಟ್ಟಿದೆ. ಈ ಚುನಾವಣೆ ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವೆ ನಡೆಯುತ್ತಿದೆ. ಬಿಜೆಪಿ ಸೋಲಿಸಬೇಕು ಕಾಂಗ್ರೆಸ್ ಗೆಲ್ಲಲೇಬೇಕು‌ ಎಂಬ ಸಂಕಲ್ಪದಿಂದ ಚುನಾವಣೆಗೆ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು, ಈ‌ ಕ್ಷೇತ್ರದಲ್ಲಿ ಈವರೆಗೂ ಯಾವುದೇ ಅಭಿವೃದ್ಧಿ‌ ಕಾರ್ಯಗಳಾಗಿಲ್ಲ. ಬೊಮ್ಮಾಯಿ ಅವರು ಸಿಎಂ ಇದ್ದಾಗಲೂ ಇಲ್ಲಿ ಅಭಿವೃದ್ಧಿಗಳಾಗಿಲ್ಲ. ಬಿಜೆಪಿ ಕೊಟ್ಟ ಮಾತಿನಂತೆ ಎಂದೂ ನಡೆದುಕೊಂಡಿಲ್ಲ. ಬಿಜೆಪಿಯವರು ವಚನ ಭ್ರಷ್ಟರು. ನಾವು ನುಡಿದಂತೆ ನಡೆದಿದ್ದೇವೆ. ಜನತೆಗೆ ಕೊಟ್ಟ ಭರವಸೆಗಳನ್ನ ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ. 

ಎಚ್‌ಎಂಟಿ ಜಾಗಕ್ಕೆ ಈಶ್ವರ್ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ

ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಅನೇಕ ಕಾರ್ಯಗಳನ್ನ ಮಾಡುತ್ತಿದ್ದೇವೆ. ಜನರು ನಮ್ಮ ಕೈ ಹಿಡಿದಿದ್ದಾರೆ ಇನ್ನೂ ಮೂರೂವರೆ ವರ್ಷಗಳ‌ ಕಾಲ ನಾವು ಮುನ್ನಡೆಯುತ್ತೇವೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರದ ಬಗ್ಗೆ ಮಾತನಾಡಿದ ಈಶ್ವರ ಖಂಡ್ರೆ, ಹಣದ ಹೊಳೆ ಹರಿಸುವವರು‌ ಬಿಜೆಪಿಯವರು. ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?. ಕೋವಿಡ್ ಸಂದರ್ಭದಲ್ಲಿ‌ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ‌ ಸುಮಾರು 50 ಸಾವಿರ ಜನ ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು‌ ಮಾತ್ರ 4 ಸಾವಿರ ಜನ.. ಅತೀ ‌ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದವರು ಬಿಜೆಪಿಯವರು. ಈ‌ ಬಗ್ಗೆ ತನಿಖೆ ಮಾಡಲು‌ ಈಗಾಗಲೇ ಸಮಿತಿ‌ ರಚಿಸಲಾಗಿದೆ. ಸಮಿತಿ‌ ಈಗಾಗಲೇ ತನಿಖೆ ಮಾಡುತ್ತಿದೆ‌ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ವಾಲ್ಮೀಕಿ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗಿದೆ. ಇನ್ನೂ‌ ಸಹ ಈ‌ ಬಗ್ಗೆ ತನಿಖೆ ನಡೆಯುತ್ತಿದೆ ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌