ವಿಧಾನ ಪರಿಷತ್‌ ಚುನಾವಣೆ 2024: ಹಿರಿಯರನ್ನ ಕೇಳದೆ ಮೇಲ್ಮನೆ ಅಭ್ಯರ್ಥಿ ಆಯ್ಕೆ, ಪರಂ ಗರಂ..!

Published : May 29, 2024, 10:46 AM IST
ವಿಧಾನ ಪರಿಷತ್‌ ಚುನಾವಣೆ 2024: ಹಿರಿಯರನ್ನ ಕೇಳದೆ ಮೇಲ್ಮನೆ ಅಭ್ಯರ್ಥಿ ಆಯ್ಕೆ, ಪರಂ ಗರಂ..!

ಸಾರಾಂಶ

ಮುಖ್ಯಮಂತ್ರಿಗಳು ಅವರು, ಮತ್ತು ಕೆಪಿಸಿಸಿ ಅಧ್ಯಕ್ಷರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿಗಳನ್ನು ಪಕ್ಷದ ಅಂತಿಮಗೊಳಿಸುವ ಮುನ್ನ ನನ್ನಂತಹ ಹಿರಿಯರ ಅಭಿಪ್ರಾಯವನ್ನೂ ಪಡೆಯಬೇಕು. ಕೆಪಿಸಿಸಿಯ ಮಾಜಿ ಅಧ್ಯಕ್ಷರುಗಳು ಸೇರಿದಂತೆ ಪಕ್ಷ ಹಾಗೂ ಸರ್ಕಾರದಲ್ಲಿ ಅನೇಕ ಸ್ಥಾನಮಾನದ ಅನುಭವ ಇರುವವರು ಇದ್ದಾರೆ. ಅಂತಹ ಎಲ್ಲ ಹಿರಿಯರು, ಅನುಭವಿಗಳ ಅಭಿಪ್ರಾಯ ಪಡೆದರೆ ಒಳ್ಳೆಯದು: ಗೃಹ ಸಚಿವ ಡಾ.ಜಿ.ಪರಮೇಶ್ವರ್ 

ಬೆಂಗಳೂರು(ಮೇ.29):  ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂ ಗ್ರೆಸ್ ಅಭ್ಯರ್ಥಿಗಳ ಅಂತಿಮಗೊಳಿಸು ವಾಗ ಮುಖ್ಯ ಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಇಬ್ಬರೇ ತೀರ್ಮಾನ ತೆಗೆದುಕೊಂಡರೆ ಸರಿ ಕಾಣುವುದಿಲ್ಲ. ಅವರು ಪಕ್ಷ ಹಾಗೂ ಸರ್ಕಾರದಲ್ಲಿನ ಎಲ್ಲ ಹಿರಿಯರ ಅಭಿಪ್ರಾಯವನ್ನು ಕೇಳಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ 'ಮುಖ್ಯಮಂತ್ರಿಗಳು ಅವರು, ಮತ್ತು ಕೆಪಿಸಿಸಿ ಅಧ್ಯಕ್ಷರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿಗಳನ್ನು ಪಕ್ಷದ ಅಂತಿಮಗೊಳಿಸುವ ಮುನ್ನ ನನ್ನಂತಹ ಹಿರಿಯರ ಅಭಿಪ್ರಾಯವನ್ನೂ ಪಡೆಯಬೇಕು. ಕೆಪಿಸಿಸಿಯ ಮಾಜಿ ಅಧ್ಯಕ್ಷರುಗಳು ಸೇರಿದಂತೆ ಪಕ್ಷ ಹಾಗೂ ಸರ್ಕಾರದಲ್ಲಿ ಅನೇಕ ಸ್ಥಾನಮಾನದ ಅನುಭವ ಇರುವವರು ಇದ್ದಾರೆ. ಅಂತಹ ಎಲ್ಲ ಹಿರಿಯರು, ಅನುಭವಿಗಳ ಅಭಿಪ್ರಾಯ ಪಡೆದರೆ ಒಳ್ಳೆಯದು. ಹಿರಿಯರ ಅಭಿಪ್ರಾಯ ಪಡೆಯದೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಇಬ್ಬರೇ ನಿರ್ಧರಿಸಿದರೆ ಅದು ನನ್ನ ಪ್ರಕಾರ ಸರಿ ಕಾಣುವುದಿಲ್ಲ' ಎಂದರು.

ವಿಧಾನ ಪರಿಷತ್ ಚುನಾವಣೆ 2024: 7 ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ 300 ಆಕಾಂಕ್ಷಿ..!

'ಅಭ್ಯರ್ಥಿಗಳ ಆಯ್ಕೆಗೆ ಜಾತಿವಾರು, ಪ್ರಾದೇಶಿಕವಾರು ಆದ್ಯತೆ ನೀಡಿ ಎಂದು ವಿವಿಧ ಸಚಿವರು ಒತ್ತಾಯಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಅದೇ ಅಭ್ಯರ್ಥಿಗಳ ಆಯ್ಕೆ ವೇಳೆ ಜಿಲ್ಲಾವಾರು, ಜಾತಿವಾರು, ಪ್ರಾದೇಶಿಕವಾರು ಜೊತೆಗೆ ಯಾರು ಪಕ್ಷಕ್ಕಾಗಿ ದುಡಿದಿದ್ದಾರೆ, ಯಾವ ಸಮುದಾಯದ ಪಕ್ಷದ ಜೊತೆ ನಿಂತಿದೆ. ಇದೆಲ್ಲವನ್ನೂ ಪರಿಗಣಿಸಬೇಕಾಗುತ್ತದೆ. ಹಾಗಾಗಿಯೇ ಏಕಾಏಕಿ ಅವರಿಬ್ಬರೇ ಕೂತು ತೀರ್ಮಾನ ಮಾಡಬಾರದು ಎಂಬುದು ನನ್ನ ಅಭಿಪ್ರಾಯ' ಎಂದರು.
ಪರಂ ಅಭಿಪ್ರಾಯ ಕೂಡ ಕೇಳುತ್ತೇವೆ

ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ವೇಳೆ ಪರಮೇಶ್ವರ್ ಅವರ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗುವುದು. ಯಾವುದನ್ನೂ ನಾವೇ ತೀರ್ಮಾನಿಸುವುದಿಲ್ಲ. ಎಲ್ಲರ ಅಭಿಪ್ರಾಯ ಪಡೆದೇ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ