ನಿಮ್ಮ ಮೇಲೂ ಆಪಾದನೆ ಬಂದಿತ್ತಲ್ಲ, ನೀವೇನು ತನಿಖೆ ಮಾಡಲು ಮುಂದಾಗಿದ್ರಾ?: ಬಿಜೆಪಿ ವಿರುದ್ಧ ಸಚಿವ ಪಾಟೀಲ್‌ ಆಕ್ರೋಶ

Published : Jul 28, 2024, 05:50 PM ISTUpdated : Jul 29, 2024, 09:30 AM IST
ನಿಮ್ಮ ಮೇಲೂ ಆಪಾದನೆ ಬಂದಿತ್ತಲ್ಲ, ನೀವೇನು ತನಿಖೆ ಮಾಡಲು ಮುಂದಾಗಿದ್ರಾ?: ಬಿಜೆಪಿ ವಿರುದ್ಧ ಸಚಿವ ಪಾಟೀಲ್‌ ಆಕ್ರೋಶ

ಸಾರಾಂಶ

ಸಿದ್ದರಾಮಯ್ಯ ಅವರು ತಮ್ಮ ಮೇಲೆ ಬಂದ ಆಪಾದನೆಗೆ ತನಿಖೆ ಮಾಡಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ತಮ್ಮ ಮೇಲೆ ತಾವೇ ತನಿಖೆ ಮಾಡಿದ್ದ ಉದಾಹರಣೆ ಇದೆಯಾ? ಎಂದು ಬಿಜೆಪಿಗರಿಗೆ ಪ್ರಶ್ನಿಸಿದ ಸಚಿವ ಎಚ್.ಕೆ. ಪಾಟೀಲ್‌ 

ಗದಗ(ಜು.28):  ಪಾದಯಾತ್ರೆಗೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ಕೊಡಲಿ. ಕುಮಾರಸ್ವಾಮಿ, ಬೊಮ್ಮಾಯಿ ಭಾಗಿಯಾಗಲಿ, ಜಗದೀಶ್ ಶೆಟ್ಟರ್ ಮುಖಂಡತ್ವ ವಹಿಸಲಿ. ನಾನು ಕೇಳ್ತೀನಿ ನಿಮ್ಮ ಮೇಲೂ ಆಪಾದನೆ ಬಂದಿತ್ತಲ್ಲ. ನಿಮ್ಮ ಕುಟುಂಬಸ್ಥರ ಮೇಲೂ ಆರೋಪ ಇತ್ತು. ಅವಾಗ ನೀವೇನು ತನಿಖೆ ಮಾಡಲು ಮುಂದಾಗಿದ್ರಾ? ಎಂದು ಮುಡಾ ಪಾದಯಾತ್ರೆ ವಿರುದ್ಧ ಸಚಿವ ಎಚ್.ಕೆ. ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಕೆ. ಪಾಟೀಲ್‌ ಅವರು,  ಸಿದ್ದರಾಮಯ್ಯ ಅವರು ತಮ್ಮ ಮೇಲೆ ಬಂದ ಆಪಾದನೆಗೆ ತನಿಖೆ ಮಾಡಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ತಮ್ಮ ಮೇಲೆ ತಾವೇ ತನಿಖೆ ಮಾಡಿದ್ದ ಉದಾಹರಣೆ ಇದೆಯಾ? ಎಂದು ಬಿಜೆಪಿಗರಿಗೆ ಪ್ರಶ್ನಿಸಿದ್ದಾರೆ.  

ಬಿಜೆಪಿ ಸರ್ಕಾರದಲ್ಲಿ ಹಗರಣ ನಡೆದಿದ್ರೆ ಯಾಕೆ ಸುಮ್ನಿದ್ರಿ? 14 ತಿಂಗಳು ಕತ್ತೆ ಕಾಯ್ತಾ ಇದ್ರಾ?: ಯತ್ನಾಳ್ ಗರಂ

ಪ್ರಜಾಪ್ರಭುತ್ವದಲ್ಲಿ ಪಾರದರ್ಶಕವಾಗಿರಲು‌ ಸಿಎಂ ಸಿದ್ದರಾಮಯ್ಯ ಇಟ್ಟ ದೊಡ್ಡ ಹೆಜ್ಜೆಯಾಗಿದೆ.  ತಪ್ಪು ಸಂದೇಶ ಸಾರುವಾವರ ವಿರುದ್ಧವೇ ಆದಾಪದನೆ ಬಂದಿದ್ದವು. ಆಗ ಯಾಕೆ ತನಿಖೆಯಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ