ರಾಜೀನಾಮೆ ವರೆಗೂ ಹೋಗಿ ಕೂಲ್ ಆದ ಸಚಿವ ಮಾಧುಸ್ವಾಮಿ..!

Published : Jan 21, 2021, 07:43 PM IST
ರಾಜೀನಾಮೆ ವರೆಗೂ ಹೋಗಿ ಕೂಲ್ ಆದ ಸಚಿವ ಮಾಧುಸ್ವಾಮಿ..!

ಸಾರಾಂಶ

ಜೆ.ಸಿ. ಮಾಧುಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿ ಇದೀಗ ಕೂಲ್ ಆಗಿದ್ದಾರೆ. ಇನ್ನು ಮಾಧುಸ್ವಾಮಿ ಪ್ರತಿಕ್ರಿಯೆ ಹೀಗಿದೆ

ಬೆಂಗಳೂರು, (ಜ.21): ಮುಖ್ಯಮಂತ್ರಿ ಬಿಎಸ್‌ಯಡಿಯೂರಪ್ಪ ಅವರು 7 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಕೆಲ ಹಳೇ ಸಚಿವರುಗಳ ಖಾತೆಯಲ್ಲೂ ಬದಲಾವಣೆ ಮಾಡಲಾಗಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

ಹೌದು...ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಕೆಲ ಸಚಿವರುಗಳು ಅಸಮಾಧಾನಗೊಂಡಿದ್ದಾರೆ. ಇದರಿಂದ ಕೆಲ ಸಚಿವರುಗಳು ಸಿಎಂ ಬಿಎಸ್ ಯಡಿಯೂರಪ್ಪನವರ ಮೇಲೆ ಮುನಿಸಿಕೊಂಡು ರಂಂಪಾಟವೇ ಮಾಡಿದರು.

ಅದರಲ್ಲೂ ಸಚಿವ ಮಾಧುಸ್ವಾಮಿ ಅಂತೂ ಮುನಿಸಿಕೊಂಡು ನಿಗೂಢ ಸ್ಥಳಕ್ಕೆ ಹೋಗಿದ್ರು. ಸಿಎಂ ಸಿದ್ಧಗಂಗಾ ಮಟಕ್ಕೆ ಹೋಗಿದ್ರು ಸಹ ಜಿಲ್ಲಾ ಉಸ್ತುವಾರಿ ಮಾಧುಸ್ವಾಮಿ ಗೈರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದರು.

ಈ ಖಾತೆ ನಾನೇನು ಮಾಡಲಿ? ಬೇಡವೇ ಬೇಡ ಎಂದ ಸಚಿವ

ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆಯನ್ನು ಕಿತ್ತುಕೊಂಡು ಅವರಿಗೆ ಇದೀಗ ಕನ್ನಡ ಮತ್ತು ಸಂಸ್ಕೃತಿಯನ್ನು ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದ ಮಾಧುಸ್ವಾಮಿ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ರು ಎನ್ನಲಾಗಿದೆ. ಆದ್ರೆ, ಇದೀಗ ಎಲ್ಲವೂ ಕೂಲ್ ಆಗಿದೆ.

ಕೂಲ್ ಆದ ಮಾಧುಸ್ವಾಮಿ
ಯೆಸ್...ಮೈತ್ರಿ ಸರ್ಕಾರ ಪತನಗೊಂಡ ಬಳಿಕ ವಿಧಾನಸೌಧದಲ್ಲಿ ವಿರೋಧ ಪಕ್ಷಗಳಿಗೆ ಪಾಯಿಂಟ್‌ ಟು ಪಾಯಿಂಟ್ ಅಬ್ಬರಿ ಬೊಬ್ಬಿರಿಯುತ್ತಿದ್ದ ಮಾಧುಸ್ವಾಮಿ ಅವರ ಖಾತೆ ಬದಲಾವಣೆ ಮಾಡಿದ್ದಕ್ಕೆ ಅವರು ತೀವ್ರ ಅಸಮಾಧಾನಗೊಂಡಿದ್ದರು. ಅಲ್ಲದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿ ಇದೀಗ ಶಾಂತರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಧುಸ್ವಾಮಿ, ಸಣ್ಣ ನೀರಾವರಿ ಬಗ್ಗೆ ಆಸಕ್ತಿ ಇದೆ ಎಂದಿದ್ದೇನೆ. 2 ದಿನದ ಹಿಂದೆ ಸಿಎಂ ಕೇಳಿದಾಗ ಹೇಳಿದ್ದೇನೆ. ಈಗ ನಾನು ಸಿಎಂ ನಿರ್ಧಾರವನ್ನು ಪ್ರಶ್ನೆ ಮಾಡಲು ಹೋಗಲ್ಲ ಎಂದು ಸ್ಪಷ್ಟಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Abhishek Bannerjee: ಆರ್ಥಿಕ ವಂಚನೆ ಪ್ರಕರಣ: ನಸುಕಿನಲ್ಲೇ ಅಭಿಷೇಕ್ ಬ್ಯಾನರ್ಜಿ ಮನೆ ಮೇಲೆ ಪೊಲೀಸ್ ದಾಳಿ! ಸೋದರಳಿಯನ ಮನೆಗೆ ಓಡೋಡಿ ಬಂದ ಮಮತಾ