ನಮಗೆ ಸ್ಪಷ್ಟ ಬಹುಮತ ಸಿಗಲಿಲ್ಲ, ವಲಸಿಗರೊಂದಿಗೆ ಸರ್ಕಾರ ರಚಿಸಿದ್ದೇವೆ: ಈಶ್ವರಪ್ಪ

Suvarna News   | Asianet News
Published : Jan 23, 2021, 02:12 PM IST
ನಮಗೆ ಸ್ಪಷ್ಟ ಬಹುಮತ ಸಿಗಲಿಲ್ಲ, ವಲಸಿಗರೊಂದಿಗೆ ಸರ್ಕಾರ ರಚಿಸಿದ್ದೇವೆ: ಈಶ್ವರಪ್ಪ

ಸಾರಾಂಶ

ಡಿಕೆಶಿಗೆ ಧಮ್ ಇದ್ದರೆ ಸಿದ್ದು ಮೇಲೆ ಕ್ರಮ ಕೈಗೊಳ್ಳಲಿ| ಇಬ್ಬರೂ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ| ಕಾಂಗ್ರೆಸ್ ಮುಳುಗೋ ದೋಣಿಯ ಸ್ಥಿತಿಯಲ್ಲಿದೆ| ಕಾಂಗ್ರೆಸ್‌ ನಾಯಕರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಅಲ್ಲಿಗೆ ಹೋಗಿ ರಾಜಕೀಯ ಬದುಕು ಕಟ್ಟಿಕೊಳ್ಳಲು ಯತ್ನಿಸುತ್ತಿದ್ದಾರೆ: ಈಶ್ವರಪ್ಪ| 

ಧಾರವಾಡ(ಜ.23): ನಮಗೆ ಪೂರ್ಣ ಪ್ರಮಾಣದ ಬಹುಮತ ಸಿಗಲಿಲ್ಲ, ಹೀಗಾಗಿ ವಲಸಿಗರೊಂದಿಗೆ ಸರ್ಕಾರ ರಚಿಸಿದ್ದೇವೆ. ಅವರಿಗೆಲ್ಲ ಸಚಿವ ಸ್ಥಾನ ನೀಡಿದ್ದೇವೆ. ಮುಂಚೆ ಕೆಲ ಗೊಂದಲವಿತ್ತು, ಇದೀಗ ಸಚಿವ ಸ್ಥಾನ ನೀಡಿದ ಬಳಿಕ ಗೊಂದಲ ನಿವಾರಣೆಯಾಗಿದೆ. ಸರ್ಕಾರ ಸುಭದ್ರವಾಗಿ ಅವಧಿ ಪೂರ್ಣಗೊಳಿಸುತ್ತದೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. 

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಸ್ಫೋಟ ಪ್ರಕರಣ ನನಗೆ ನಿಜವಾಗಿಯೂ ಆಶ್ಚರ್ಯವಾಗಿದೆ. ನಾನು ಹುಟ್ಟಿ ಬೆಳೆದಿದ್ದು ಶಿವಮೊಗ್ಗದಲ್ಲಿಯೇ, ಇದೇ ಮೊದಲು ಇಂಥಹ ಘಟನೆ ಯಾವತ್ತೂ ನಡೆದಿರಲಿಲ್ಲ. ನಿನ್ನೆ ತಜ್ಞರು ಬಂದಿದ್ದಾರೆ, ಅವರ ವರದಿ ಬಂದ ಬಳಿಕ ಕ್ರಮನ ತೆಗೆದುಕೊಳ್ಳಲಾಗುತ್ತಿದೆ. ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಡುತ್ತಿದ್ದಾರೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಎರಡು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಕ್ತ: ಸಚಿವ ಈಶ್ವರಪ್ಪ

ಸಿದ್ದರಾಮುಯ್ಯ ಸಿಎಂ ಆಗೋದಾಗಿ ಹೇಳಿಕೆ ನೀಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್‌. ಈಶ್ವರಪ್ಪ, ಡಿಕೆಶಿಗೆ ಧಮ್ ಇದ್ದರೆ ಸಿದ್ದು ಮೇಲೆ ಕ್ರಮ ಕೈಗೊಳ್ಳಲಿ, ಇಬ್ಬರೂ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಮುಳುಗೋ ದೋಣಿಯ ಸ್ಥಿತಿಯಲ್ಲಿದೆ. ಪಕ್ಷದ ನಾಯಕರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಅಲ್ಲಿಗೆ ಹೋಗಿ ರಾಜಕೀಯ ಬದುಕು ಕಟ್ಟಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!