ಯತ್ನಾಳ್‌ ಉಚ್ಚಾಟನೆ ಮಾಡಲು ಶಿಫಾರಸ್ಸು ಮಾಡಿದ್ದೇನೆ: ಸಚಿವ ಈಶ್ವರಪ್ಪ

Kannadaprabha News   | Asianet News
Published : Oct 22, 2020, 10:36 AM ISTUpdated : Oct 22, 2020, 01:21 PM IST
ಯತ್ನಾಳ್‌ ಉಚ್ಚಾಟನೆ ಮಾಡಲು ಶಿಫಾರಸ್ಸು ಮಾಡಿದ್ದೇನೆ: ಸಚಿವ ಈಶ್ವರಪ್ಪ

ಸಾರಾಂಶ

ಯತ್ನಾಳ್‌ ಹೇಳಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಈಶ್ವರಪ್ಪ| ಯತ್ನಾಳ್‌ ಹೇಳಿಕೆ ಹುಚ್ಚಾಟದ ಪರಮಾವಧಿ. ಅದು ಬಿಟ್ಟರೆ ಮತ್ತೇನಲ್ಲ| ಯತ್ನಾಳ್‌ಗೆ ಶಿಸ್ತು ಇಲ್ಲದಿರಬಹುದು. ಆದರೆ, ಬಿಜೆ​ಪಿ​ಗೆ ಶಿಸ್ತಿದೆ. ಅದು ತನ್ನ ಕೆಲಸವನ್ನು ಮಾಡಿಯೇ ಮಾಡುತ್ತದೆ| 

ಬಳ್ಳಾರಿ(ಅ.22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪದಚ್ಯುತಿ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು, ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

"

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ ಸಂಬಂಧ ನಗರದಲ್ಲಿ ಬುಧವಾರ ಸಂಜೆ ಜರುಗಿದ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಈಶ್ವರಪ್ಪ ಅವರು, ಯತ್ನಾಳ್‌ ಅವರ ಹೇಳಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಯತ್ನಾಳ್‌ ಅವರ ಹೇಳಿಕೆ ಹುಚ್ಚಾಟದ ಪರಮಾವಧಿ. ಅದು ಬಿಟ್ಟರೆ ಮತ್ತೇನಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. 

ಸಿಎಂ ವಿರುದ್ಧ ಮತ್ತೆ ಹರಿಹಾಯ್ದ ಯತ್ನಾಳ್, ಯಡಿಯೂರಪ್ಪಗೆ ಎಚ್ಚರಿಕೆ ಸಂದೇಶ..!

ಶಾಸಕಾಂಗ ಪಕ್ಷದ ಸಭೆಗೆ ಬಂದಿದ್ದ ಯತ್ನಾಳ್‌ ಅವರು ಅಲ್ಲಿ ಏನೂ ಮಾತನಾಡಲಿಲ್ಲ. ಇದ್ದಕ್ಕಿದ್ದಂತೆಯೇ ಮುಖ್ಯಮಂತ್ರಿಗಳ ಬದಲಾವಣೆ ಆಗುತ್ತದೆ. ಮೋದಿ ಅವರ ಸಮ್ಮತಿ ಎಂದು ಹುಚ್ಚಾಟದ ಹೇಳಿಕೆ ನೀಡಿದ್ದಾರೆ. ಯತ್ನಾಳ್‌ಗೆ ಶಿಸ್ತು ಇಲ್ಲದಿರಬಹುದು. ಆದರೆ, ಬಿಜೆ​ಪಿ​ಗೆ ಶಿಸ್ತಿದೆ. ಅದು ತನ್ನ ಕೆಲಸವನ್ನು ಮಾಡಿಯೇ ಮಾಡುತ್ತದೆ. ಶಿಸ್ತುಕ್ರಮಕ್ಕೆ ಪಕ್ಷದ ರಾ​ಜ್ಯಾಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ