ಕಾಂಗ್ರೆಸ್ಸಿನದು ಓಲೈಕೆ ರಾಜಕಾರಣ: ಸಚಿವ ಸುಧಾಕರ್‌

Published : Nov 10, 2022, 03:30 AM IST
ಕಾಂಗ್ರೆಸ್ಸಿನದು ಓಲೈಕೆ ರಾಜಕಾರಣ: ಸಚಿವ ಸುಧಾಕರ್‌

ಸಾರಾಂಶ

ಸತೀಶ್‌ ಜಾರಕಿಹೊಳಿ ಹೇಳಿಕೆ ವೈಯಕ್ತಿಕ ಎನ್ನುವುದಾದರೆ ಅವರ ಮೇಲೆ ಕಾಂಗ್ರೆಸ್‌ ಕ್ರಮ ತೆಗೆದುಕೊಳ್ಳಬೇಕಿತ್ತು. ಅವರನ್ನು ಪಕ್ಷದಿಂದ ವಜಾ ಮಾಡಬೇಕಿತ್ತು. ಇಲ್ಲ ಅವರಿಂದ ಕ್ಷಮಾಪಣೆಯಾದರೂ ಹೇಳಿಸಬೇಕಿತ್ತು ಎಂದ ಸಚಿವ ಸುಧಾಕರ್‌ 

ಚಿಕ್ಕಬಳ್ಳಾಪುರ(ನ.10):  ಕಾಂಗ್ರೆಸ್‌ ಹಿಂದೂ ವಿರೋಧಿ, ಕಾಂಗ್ರೆಸ್‌ನಲ್ಲಿ ಹಿಂದೂ ವಿರೋಧಿ ಭಾವನೆ ರಕ್ತಗತವಾಗಿ ಬಂದಿದೆ. ಕಾಂಗ್ರೆಸ್‌ ಬರೀ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಹೇಳಿಕೆ ವೈಯಕ್ತಿಕ ಎನ್ನುವುದಾದರೆ ಅವರ ಮೇಲೆ ಕಾಂಗ್ರೆಸ್‌ ಕ್ರಮ ತೆಗೆದುಕೊಳ್ಳಬೇಕಿತ್ತು. ಅವರನ್ನು ಪಕ್ಷದಿಂದ ವಜಾ ಮಾಡಬೇಕಿತ್ತು. ಇಲ್ಲ ಅವರಿಂದ ಕ್ಷಮಾಪಣೆಯಾದರೂ ಹೇಳಿಸಬೇಕಿತ್ತು ಎಂದರು.

ವಿಜಯಪುರ: ಬಬಲೇಶ್ವರದಲ್ಲಿ ಕಾಂಗ್ರೆಸ್‌- ಬಿಜೆಪಿ ಘಟಾನುಗಟಿ ನಾಯಕರ ಕಿತ್ತಾಟ..!

ಧರ್ಮಗಳನ್ನು ಓಲೈಸಿಕೊಂಡು ಅವರನ್ನು ಮತಬ್ಯಾಂಕ್‌ ಮಾಡಿಕೊಂಡು ಕಾಂಗ್ರೆಸ್‌ ಇಷ್ಟುವರ್ಷ ದೇಶದಲ್ಲಿ ರಾಜಕಾರಣ ನಡೆಸಿದೆ. ಈಗ ದೇಶದ ಜನರಲ್ಲಿ ರಾಜಕೀಯ ಪ್ರಜ್ಞೆ ಬಂದಿದೆ. ಇವರ ಹಿಡನ್‌ ಅಜೆಂಡಾಗಳ ಬಗ್ಗೆ ಜನತೆಗೆ ಗೊತ್ತಾಗಿದೆ. ಆದ್ದರಿಂದ ಕಳೆದ 10 ವರ್ಷದಿಂದ ಅವರನ್ನು ಎಲ್ಲಿ ಇಡಬೇಕು ಅಲ್ಲಿ ಇಟ್ಟಿದ್ದಾರೆಂದು ಸುಧಾಕರ್‌ ಕಾಂಗ್ರೆಸ್‌ ವಿರುದ್ಧ ಟೀಕಿಸಿದರು.

ಕರ್ನಾಟಕದಲ್ಲಿ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆಯ ವೇಳೆ ಬಹಳಷ್ಟುಕಾಂಗ್ರೆಸ್‌ ನಾಯಕರು ಅನೇಕ ದೇವಾಲಯಗಳಿಗೆ ಹೋಗಿ ಹಣೆಗೆ ಕುಂಕಮ, ವಿಭೂತಿ ಹಚ್ಚಿಕೊಂಡು ಬಂದಿದ್ದಾರೆ. ಆದರೆ ಈಗ ಹಿಂದೂಗಳ ಬಗ್ಗೆ ಈ ರೀತಿ ಅವಹೇಳನವಾಗಿ ಮಾತನಾಡುತ್ತಾರೆಂದರು. ಯಾರೋ ಈ ಮಾತನ್ನು ಹೇಳಿದ್ದರೆ ನಾವು ಅಷ್ಟೊಂದು ಪರಿಗಣಿಸುವ ಅವಶ್ಯಕತೆ ಇರಲಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷರು ಈ ರೀತಿ ಮಾತನಾಡುವುದು ಎಷ್ಟುಮಾತ್ರ ಸರಿ. ಈ ಬಗ್ಗೆ ಅವರ ಪಕ್ಷದ ನಾಯಕರೇ ಹೇಳಬೇಕೆಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ