
ಬೆಂಗಳೂರು(ಜೂ.27): ರಮೇಶ್ ಜಾರಕಿಹೊಳಿಗೆ ಕೆಲ ಬೆಳವಣಿಗೆಗಳಿಂದ ನೋವಾಗಿದೆ. ಅವರ ಸ್ಥಾನದಲ್ಲಿ ಯಾರೇ ಇದ್ದರೂ ಇದೇ ಪರಿಸ್ಥಿತಿ ಉದ್ಭವವಾಗುತ್ತಿತ್ತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಜಾರಕಿಹೊಳಿ ಹೇಳಿಕೆ ನೀಡಿದ್ದಾರಲ್ಲಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ರಾಜೀನಾಮೆ ನೀಡುವುದಿಲ್ಲ ಎಂದು ಜಾರಕಿಹೊಳಿ ಸ್ಪಷ್ಪಪಡಿಸಿದ್ದಾರೆ ಎಂದು ತಿಳಿಸಿದರು.
ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ: ಸುಧಾಕರ್ ಹೇಳಿದ್ದಿಷ್ಟು
ರಮೇಶ ಜಾರಕಿಹೊಳಿ ಶನಿವಾರ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಆರ್ಎಸ್ಎಸ್ ಮುಖಂಡರನ್ನು ಭೇಟಿಯಾಗಿದ್ದು, ಜಾರಕಿಹೊಳಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.