ಭ್ರಷ್ಟಾಚಾರ ಆರೋಪಿಗಳ ಸರ್ಟಿಫಿಕೆಟ್‌ ನನಗೆ ಬೇಕಿಲ್ಲ: ಡಿಕೆಶಿ ಹೇಳಿಕೆಗೆ ಸುಧಾಕರ್‌ ತಿರುಗೇಟು

Kannadaprabha News   | Asianet News
Published : Dec 26, 2020, 10:09 AM ISTUpdated : Dec 26, 2020, 10:20 AM IST
ಭ್ರಷ್ಟಾಚಾರ ಆರೋಪಿಗಳ ಸರ್ಟಿಫಿಕೆಟ್‌ ನನಗೆ ಬೇಕಿಲ್ಲ: ಡಿಕೆಶಿ ಹೇಳಿಕೆಗೆ ಸುಧಾಕರ್‌ ತಿರುಗೇಟು

ಸಾರಾಂಶ

ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದವರು ಮೊದಲು ತಮ್ಮ ಹಿನ್ನೆಲೆ ಏನೆಂಬುದನ್ನು ಅರಿತು ಮಾತನಾಡಬೇಕು, ಇವರ ಹಿನ್ನೆಲೆ ಏನೆಂಬುದು ಇಡೀ ದೇಶ ಮತ್ತು ರಾಜ್ಯಕ್ಕೆ ಗೊತ್ತಿದೆ: ಸಚಿವ ಡಾ.ಕೆ.ಸುಧಾಕರ್‌ 

ಬೆಂಗಳೂರು(ಡಿ.26): ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗೆ ಇರುವವರು ನನಗೆ ಸರ್ಟಿಫಿಕೆಟ್‌ ನೀಡುವುದು ಬೇಡ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಕಾಂಗ್ರೆಸ್ಸಿನ ಡಿ.ಕೆ.ಸಹೋದರರಿಗೆ ತಿರುಗೇಟು ನೀಡಿದ್ದಾರೆ.

"

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋಜು, ಮಸ್ತಿ, ಭ್ರಷ್ಟಾಚಾರದ ಆರೋಪ ಹೊತ್ತುಕೊಂಡು ಜಾಮೀನಿನ ಮೇಲೆ ಹೊರಗೆ ಇರುವವರು ಯಾರು ಮತ್ತು ಅವರ ರಾಜಕೀಯ ಹಿನ್ನೆಲೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಇಂತಹವರಿಂದ ನಾನು ನನ್ನ ಇಲಾಖೆಯ ಬಗ್ಗೆ ಹೇಳಿಸಿಕೊಳ್ಳಬೇಕಾದ ಅಗತ್ಯ ಇಲ್ಲ ಎಂದರು.

ನೈಟ್ ಕರ್ಫ್ಯೂ ನಿರ್ಧಾರ ಮಾಡಿದ್ದ ಆ ಸಚಿವಗೆ ಡಿಕೆಶಿ ಫುಲ್ ಕ್ಲಾಸ್..!

ಯಾರು ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದಿದ್ದಾರೋ ಅಂತಹವರು ನನ್ನ ಬಗ್ಗೆ ಮಾತನಾಡಿದ್ದಾರೆ. ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದವರು ಮೊದಲು ತಮ್ಮ ಹಿನ್ನೆಲೆ ಏನೆಂಬುದನ್ನು ಅರಿತು ಮಾತನಾಡಬೇಕು. ಇವರ ಹಿನ್ನೆಲೆ ಏನೆಂಬುದು ಇಡೀ ದೇಶ ಮತ್ತು ರಾಜ್ಯಕ್ಕೆ ಗೊತ್ತಿದೆ ಎಂದು ಕಿಡಿಕಾರಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ
ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: ಡಿ.ಕೆ.ಶಿವಕುಮಾರ್