ಮಾದಿಗರಿಗೆ ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟ ವಿಚಾರ: ಸಚಿವ ಮುನಿಯಪ್ಪ

Published : Nov 07, 2023, 06:00 AM IST
ಮಾದಿಗರಿಗೆ ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟ ವಿಚಾರ: ಸಚಿವ ಮುನಿಯಪ್ಪ

ಸಾರಾಂಶ

ಮಾದಿಗ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ಬೇಡಿಕೆ ನನ್ನ ಗಮನಕ್ಕೂ ಇದೆ. ಆದರೆ, ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದಷ್ಟೇ ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ 

ಬೆಂಗಳೂರು(ನ.07):  ಮಾದಿಗ ಸಮುದಾಯದವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಾದಿಗ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ಬೇಡಿಕೆ ನನ್ನ ಗಮನಕ್ಕೂ ಇದೆ. ಆದರೆ, ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದಷ್ಟೇ ಪ್ರತಿಕ್ರಿಯಿಸಿದರು.

ನಮ್ಮದೇ ಸರ್ಕಾರ ಇದ್ರೂ ಮಾದಿಗ ಒಳಮೀಸಲಾತಿ ನೀಡಲಾಗುತ್ತಿಲ್ಲ:-ಕೆಎಚ್ ಮುನಿಯಪ್ಪ ಬೇಸರ

ಇನ್ನು, ಎಚ್‌.ಆಂಜನೇಯ ಅವರಿಗೆ ಹೈಕಮಾಂಡ್‌ನವರೇ ನಿಮ್ಮ ಕ್ಷೇತ್ರದ ರಿಪೋರ್ಟ್ ಸರಿಯಿಲ್ಲ. ನೀವು ದೊಡ್ಡ ನಾಯಕರು, ಚುನಾವಣೆ ಎದುರಿಸುವ ಬಗ್ಗೆ ಯೋಚಿಸಿ ಎಂದು ಹೇಳಿದ್ದರು. ಆದರೆ, ಚುನಾವಣೆಯಲ್ಲಿ ವ್ಯತಿರಿಕ್ತ ಫಲಿತಾಂಶ ಬಂತು. ಅವರನ್ನು ಸಚಿವ ಸ್ಥಾನದಲ್ಲಿ ನೋಡಲು ನಾನು ಬಯಸುತ್ತೇನೆ. ನಾನೇನು ಬಯಸಿ ರಾಜ್ಯ ರಾಜಕಾರಣಕ್ಕೆ ಬಂದಿಲ್ಲ. ಹೈಕಮಾಂಡ್‌ ಸೂಚನೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕೆಂಬ ಕಾರಣಕ್ಕೆ ಬಂದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್