ಬಿಜೆಪಿ ಸಂಸದರನ್ನು 'ನಪುಂಸಕರು' ಎಂದ ಸಚಿವ ಕೆಎನ್ ರಾಜಣ್ಣ!

Published : Mar 22, 2024, 10:51 PM IST
ಬಿಜೆಪಿ ಸಂಸದರನ್ನು 'ನಪುಂಸಕರು' ಎಂದ ಸಚಿವ ಕೆಎನ್ ರಾಜಣ್ಣ!

ಸಾರಾಂಶ

ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ಹೋಗಿರುವ ಒಬ್ಬ ಸಂಸದನಾದರೂ ಪಾರ್ಲಿಮೆಂಟ್‌ ಒಳಗೆ ಆಗಲಿ, ಹೊರಗಡೆ ಆಗಲಿ ನಮ್ಮ ರಾಜ್ಯಕ್ಕೆ ನಿಯಮಾನುಸಾರ ಏನೆಲ್ಲ ಅನುಕೂಲ ನೀಡಬೇಕೋ ಅದನ್ನು ಕೊಡಿ ಎಂದು ಕೇಳಿಲ್ಲ ಇಂತಹ ನಪುಂಸಕರನ್ನು ಆರಿಸಿ ಕಳಿಸಿದ್ದಕ್ಕೆ ಅವಮಾನವಾಗುತ್ತಿದೆ ಎಂದ ಕೆಎನ್ ರಾಜಣ್ಣ  

ಹಾಸನ (ಮಾ.22): ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ಹೋಗಿರುವ ಒಬ್ಬ ಸಂಸದನಾದರೂ ಪಾರ್ಲಿಮೆಂಟ್‌ ಒಳಗೆ ಆಗಲಿ, ಹೊರಗಡೆ ಆಗಲಿ ನಮ್ಮ ರಾಜ್ಯಕ್ಕೆ ನಿಯಮಾನುಸಾರ ಏನೆಲ್ಲ ಅನುಕೂಲ ನೀಡಬೇಕೋ ಅದನ್ನು ಕೊಡಿ ಎಂದು ಕೇಳಿಲ್ಲ. ಇಂತಹ ನಪುಂಸಕರನ್ನ ರಾಜ್ಯದಿಂದ ಲೋಕಸಭೆಗೆ ಆರಿಸಿ ಕಳಿಸಿದ್ದೇವೆ ಇದು ನಮಗೆಲ್ಲ ಅವಮಾನ ಆಗುತ್ತಿದೆ ಎಂದು ಬಿಜೆಪಿ ಸಂಸದ ವಿರುದ್ಧ ಸಚಿವ ಕೆಎನ್ ರಾಜಣ್ಣ ತೀವ್ರ ವಾಗ್ದಾಳಿ ನಡೆಸಿದರು.

ಇಂದು ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಬೆಂಬಲಿಸುವ ಕುರಿತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವ, ಹತ್ತು ವರ್ಷಗಳು ನರೇಂದ್ರ ಮೋದಿಯವರು ಬರೀ ಸುಳ್ಳು ಹೇಳಿದರೆ ಹೊರತು ಬೇರೆ ಏನೂ ಮಾಡಲಿಲ್ಲ. ಎರಡು ಕೋಟಿ ಉದ್ಯೋಗ ನೀಡಲಿಲ್ಲ. ಹದಿನೈದು ಲಕ್ಷ ಹಣ ಕೊಡಲಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

ಈ ಸಲ ಟಿಕೆಟ್ ಬೇಡ ಎಂದಿದ್ದೆ, ಹೈಕಮಾಂಡ್ ಕೊಟ್ಟಿದೆ: ಸಂಸದ ರಮೇಶ್ ಜಿಗಜಿಣಗಿ

ನಾವೆಲ್ಲ ಸಚಿವರು ಹೋಗಿ ಪ್ರತಿಭಟನೆ ಮಾಡಿದೆವು. ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನವನ್ನು ದೆಹಲಿಯಲ್ಲಿ ಮಾಡಿದೆವು. ಬರಗಾಲವಿದೆ, ಕುಡಿಯುವ ನೀರಿಗೆ ಹಾಹಾಕಾರವಿದೆ, ಜಾನುವಾರುಗಳಿಗೆ ಮೇವು ಇಲ್ಲ ಆದರೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲ. ನಮ್ಮ ರಾಜ್ಯದಿಂದ ನೂರು ರೂಪಾಯಿ ಹೋದರೆ ನಮಗೆ ಬರುವುದು ಹದಿಮೂರು ಪೈಸೆ ಮಾತ್ರ. ನಾವು ಪ್ರತಿವರ್ಷ ನಾಲ್ಕು ಲಕ್ಷ ಕೋಟಿಗೂ ಹೆಚ್ಚು ಹಣ ಕೇಂದ್ರಕ್ಕೆ ತೆರಿಗೆ ನೀಡುತ್ತೇವೆ.

ಲೋಕಸಭೆಯಲ್ಲಿ 20 ಕ್ಷೇತ್ರ ಗೆಲ್ಲದಿದ್ದರೆ ಸರ್ಕಾರ ನಡೆಸಲು ನೈತಿಕತೆ ಇರಲ್ಲ: ಸಚಿವ ರಾಜಣ್ಣ

ಆದರೆ ನಮ್ಮಿಂದ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮ್ಮ ಪಾಲು ನಮಗೆ ನೀಡಲು ಮಲತಾಯಿ ಧೋರಣೆ ಮಾಡುತ್ತಿದೆ. ನಮ್ಮ ರಾಜ್ಯದ ಯಾವುದೇ ಸಮಸ್ಯೆ ಲೋಕಸಭೆಯಲ್ಲಿ ಚರ್ಚೆಯಾಗಿಲ್ಲ. ಇಲ್ಲಿಂದ ಆಯ್ಕೆಯಾಗಿ ಹೋದ ಯಾವ ಸಂಸದನೂ ಕೇಂದ್ರದ ಬಳಿ ಬರಿಪರಿಹಾರ ಕೇಳುವ ಧೈರ್ಯ ಮಾಡುತ್ತಿಲ್ಲ. ಇಂಥ ನಪುಂಸಕರನ್ನ ಆರಿಸಿ ಕಳಿಸಿದ್ದಕ್ಕೆ ನಮಗೆ ಅವಮಾನ ಆಗುತ್ತಿದೆ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ