
ಮದ್ದೂರು(ಆ.06): ಜೆಡಿಎಸ್ ಜೋಕರ್ ಇದ್ದಂತೆ. ಇಸ್ಪೀಟ್ ಆಟದಲ್ಲಿರುವಂತೆ ಜೆಡಿಎಸ್ ಅನ್ನು ಹೇಗಾದರೂ ಹೊಂದಿಸಿಕೊಳ್ಳಬಹುದು. ಇತ್ತ ರಮ್ಮಿ ಆಡುವುದಕ್ಕೆ, ಅತ್ತ ಸೆಟ್ ಆಟಕ್ಕೂ ಸೇರಿಸಿಕೊಳ್ಳಬಹುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯವಾಡಿದ್ದಾರೆ.
ಸೋಮವಾರ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮೇಲೆ ನನಗೇನೂ ದ್ವೇಷವಿಲ್ಲ. ಆದರೆ, ಜೆಡಿಎಸ್ನಲ್ಲಿರುವ ಅಪ್ಪ-ಮಗನೇ ನನ್ನ ಟಾರ್ಗೆಟ್ ಎಂದು ಹೇಳಿದ್ದರು.
ಅಪೆಕ್ಸ್ ಬ್ಯಾಂಕ್ನಲ್ಲಿ ಸಾಲ ನೀಡುವಲ್ಲಿ ಗೋಲ್ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !
ಆ ಮಾತನ್ನು ಜೆಡಿಎಸ್ನವರು ಈಗ ಮರೆತಿದ್ದಾರೆ. ಬಿಜೆಪಿ-ಜೆಡಿಎಸ್ನವರು ಮೈತ್ರಿಯೋ, ಮದುವೆಯೋ ಏನೋ ಆಗಿದ್ದಾರೆ. ಈ ಮೈತ್ರಿ ಅದೆಷ್ಟು ದಿನ ಉಳಿಯುವುದೋ ನೋಡೋಣ ಎಂದು ಕುಟುಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.