
ವಿಜಯಪುರ(ನ.30): ಶಾಸಕ ಬಿ.ಆರ್. ಪಾಟೀಲ ಅವರು ಮಾಡುತ್ತಿರುವ ಟೀಕೆ, ದೂರುಗಳು ನನ್ನ ಇಲಾಖೆಗೆ ಸಂಬಂಧಿಸಿದ್ದಲ್ಲ. ಯಾವುದೇ ತನಿಖೆ ಮಾಡಿಸಲಿ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸದನದಲ್ಲಿ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಇಲಾಖೆ ಸಂಬಂಧಿಸಿದ ಪ್ರಶ್ನೆ ಕೇಳಿದ್ದರು. ಗ್ರಾಮೀಣ ಸಚಿವರ ಗೈರಲ್ಲಿ ಆಗ ನಾನು ಉತ್ತರ ನೀಡಿದ್ದೆ. ಅವರು ದಾಖಲೆ ಇವೆ ಎನ್ನುತ್ತಿರುವುದು ನನ್ನ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಹೇಳಿದ್ದಾರೆ.
ಸಚಿವರ ವಿರುದ್ಧ ಮತ್ತೆ ಶಾಸಕ ಲೆಟರ್ಬಾಂಬ್: ಸಿಎಂಗೆ ಕೈ ಶಾಸಕ ಬಿ.ಆರ್.ಪಾಟೀಲ್ ಪತ್ರ
ಕಳೆದ ಬಾರಿಯ ಸಿದ್ದರಾಮಯ್ಯರ ಸರ್ಕಾರದಲ್ಲಿ ಲ್ಯಾಂಡ್ ಆರ್ಮಿಯಿಂದ ಕೆಲಸ ಇನ್ನೂ ಆಗದೇ ಉಳಿದಿವೆ. ಅವು ಮುಂದುವರಿಸಬೇಕು ಎಂದು ಪಾಟೀಲರು ಸದನದಲ್ಲಿ ತಕರಾರು ಎತ್ತಿದ್ದರು. ಅದಕ್ಕೆ ಗ್ರಾಮೀಣ ಇಲಾಖೆ ಸಚಿವರ ಪರವಾಗಿ ನಾನು ಉತ್ತರಿಸಿದ್ದೆ. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರವೂ ಬರೆದಿದ್ದಾರೆ. ಯಾವುದೇ ತನಿಖೆ ಕೂಡ ಮಾಡಿಸಬಹುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.