'ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿವೆ'

Published : Jan 17, 2021, 08:12 PM IST
'ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿವೆ'

ಸಾರಾಂಶ

ಏಪ್ರಿಲ್‌ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿರುವ ಸಿದ್ದರಾಂಯ್ಯಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ಕೊಟ್ಟಿದ್ದಾರೆ.

ಮೈಸೂರು, (ಜ.18) : ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯನವರು ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ ಅದ್ಯಾವಾಗ ಸಿದ್ದರಾಮಯ್ಯನವರು ಜ್ಯೋತಿಷ್ಯರಾಗಿದ್ದಾರೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಚಾಮುಂಡಿ ಬೆಟ್ಟದಲ್ಲಿ ಸಚಿವ ಕೆ ಎಸ್​ ಈಶ್ವರಪ್ಪ ಪ್ರತಿಕ್ರಿಯಸಿದ್ದು, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ ಎಂದರು.

 ಅದು ಯಾವುದೂ ನಿಜ ಆಗಲ್ಲ. ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ  ಎಂದು ತಿರುಗೇಟು ನೀಡಿದರು. 

 ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್​​ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ