'ವಿಶ್ವನಾಥ್ ಪ್ರೆಸ್ ಮೀಟ್ ಕರೆದು BJP,ಕಾಂಗ್ರೆಸ್, ಜೆಡಿಎಸ್ ಯಾವ್ದೆಂದು ಹೇಳಲಿ'

Suvarna News   | Asianet News
Published : Mar 21, 2021, 02:31 PM ISTUpdated : Mar 21, 2021, 02:47 PM IST
'ವಿಶ್ವನಾಥ್ ಪ್ರೆಸ್ ಮೀಟ್ ಕರೆದು BJP,ಕಾಂಗ್ರೆಸ್, ಜೆಡಿಎಸ್ ಯಾವ್ದೆಂದು ಹೇಳಲಿ'

ಸಾರಾಂಶ

ಎಚ್. ವಿಶ್ವನಾಥ್  ಯಾವ  ಪಕ್ಷ ಎಂದು ಹೇಳಲಿ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದೆಂದು ಪ್ರೆಸ್ ಮೀಟ್ ಕರೆದು ಹೇಳಲಿ ಎಂದು ಸಚಿವರು ಹೇಳಿದರು.

ಶಿವಮೊಗ್ಗ (ಮಾ.21): ಮಹಾ ಪಂಚಾಯತ್ ಹೆಸರಿನಲ್ಲಿ ರೈತರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಹಳಸಿ ಹೋಗಿದೆ.  ಯಾವ ವೇದಿಕೆ ಮೂಲಕ ಹೋದರೂ ಜನರು ಬರುವುದಿಲ್ಲ ಎಂದು ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. 

ಶಿವಮೊಗ್ಗದಲ್ಲಿಂದು ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪ ರೈತರ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದೆ. ಈ ಸಮಾವೇಶಕ್ಕೆ ನಿರೀಕ್ಷೆ ಮಾಡಿದಷ್ಟು ಜನ ಬೆಂಬಲ ಸಿಕ್ಕಿಲ್ಲ ಫೆಲ್ಯೂರ್ ಆಗಿದೆ ಎಂದರು. 

ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ಧ.  ಉಪ ಚುನಾವಣೆ ಬಳಿಕ ಸಿಎಂ ಬದಲಾವಣೆ ಕುರಿತು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತೇವೆ. ಯಡಿಯೂರಪ್ಪ ಬದಲಾವಣೆ ಆಗುತ್ತಾರೋ ಬಿಡ್ತಾರೋ ನನಗಂತೂ ಗೋತ್ತಿಲ್ಲ. ಬಸನ ಗೌಡ ಯತ್ನಾಳ್ ಯಾವ ಮೂಲದಿಂದ ಹೇಳುತ್ತಾರೋ  ಎಂದು ಈಶ್ವರಪ್ಪ ಹೇಳಿದರು.

'ಈ ಸುರಸುಂದರಿಗೆ ಮಾರು ಹೋಗದವರಿಲ್ಲ : ಎಷ್ಟೋ ಜನ ಮನೆ-ಮಠ ಕಳ್ಕೊಂಡಿದಾರೆ' .

ಇನ್ನು ಇದೇ ವೇಳೆ ಎಚ್. ವಿಶ್ವನಾಥ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಈಶ್ವರಪ್ಪ ಹಿರಿಯರು ನಾಲ್ಕು ಗೋಡೆಗಳ ಮಧ್ಯೆ ಹೇಳಲಿ ತಿದ್ದಿ ಕೊಳ್ಳುತ್ತೇವೆ. ವಿಶ್ವನಾಥ ರವರು ಮಂತ್ರಿಗಿರಿ ಸಿಕ್ಕಿಲ್ಲ ಎಂದು ಆರೋಪ ಮಾಡೋದು ಬೇಡ.  ವಿಶ್ವನಾಥ್ ಪ್ರೆಸ್ ಮೀಟ್ ಕರೆದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾವುದು ಒಳ್ಳೆಯದು ಎಂದು ಹೇಳಲಿ ಎಂದರು.

ಹುಣಸೋಡು ಸ್ಪೋಟ ವಿಚಾರ ಪ್ರಸ್ತಾಪ : ಹುಣಸೋಡು ಸ್ಪೋಟ ಘಟನೆ ಸಿಬಿಐ ತನಿಖೆ ನಡೆಸಲು ಮಾಜಿ ಶಾಸಕ ಪ್ರಸನ್ನ ಕುಮಾರ್ ಒತ್ತಾಯ ಮಾಡಿದ್ದಾರೆ.  ಸಿಬಿಐ ತನಿಖೆ ನಡೆಸಲು ನನ್ನದೇನೂ ಆಭ್ಯಂತರವಿಲ್ಲ.  ಆದರೆ ಯಾವುದೇ ಒಂದು ಘಟನೆ ಹಿಡಿದು ಹೀಗೆ ಆಗ್ರಹಿಸುವುದು ಸರಿಯಲ್ಲ ಎಂದು ಈಶ್ವರಪ್ಪ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?