ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಚಿವೆ ಹೆಬ್ಬಾಳಕರ ಹೇಳಿದ್ದಿಷ್ಟು

Published : Jun 20, 2023, 08:32 PM IST
ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಚಿವೆ ಹೆಬ್ಬಾಳಕರ ಹೇಳಿದ್ದಿಷ್ಟು

ಸಾರಾಂಶ

ಜನ ನಮಗೆ ಆರ್ಶೀವಾದ ಮಾಡಿದ್ದಾರೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆ ಈಡೇರಿಸಲು ಮಾತ್ರ ನಮ್ಮ ಚಿತ್ತವಿದೆ. ಅದಕ್ಕೆ ನಾವು ಆದ್ಯತೆ ಕೊಡುತ್ತೇವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ 

ಬೆಳಗಾವಿ(ಜೂ.20):  ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರೇ ಹೇಳಿಕೆ ನೀಡಿದರೂ ಹೈ ಕಮಾಂಡ್‌ ಗಮನಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ನಮಗೆ ಆರ್ಶೀವಾದ ಮಾಡಿದ್ದಾರೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆ ಈಡೇರಿಸಲು ಮಾತ್ರ ನಮ್ಮ ಚಿತ್ತವಿದೆ. ಅದಕ್ಕೆ ನಾವು ಆದ್ಯತೆ ಕೊಡುತ್ತೇವೆ ಎಂದರು.

ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾರು ಹೇಳಿಕೆ ಕೊಟ್ಟಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ನೀವು ಈ ಕುರಿತು ಅವರನ್ನೇ ಕೇಳಿ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳದ್ದು ಹೊರತು ನಮ್ಮ ಪಕ್ಷದಲ್ಲಿಲ್ಲ. ಮುಂಗಾರು ಮಳೆ ಸಕಾಲಕ್ಕೆ ಆಗಿಲ್ಲ. ರೈತರ ಅನುಕೂಲವಾಗುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತದೆ. ಅವಶ್ಯಕತೆ ಬಿದ್ದರೆ ಮೋಡ ಬಿತ್ತನೆ ಆಗಿರಬಹುದು, ಮತ್ತೊಂದು ಆಗಿರಬಹುದು ಎಲ್ಲವನ್ನೂ ಸರ್ಕಾರ ಮಾಡುತ್ತದೆ ಎಂದು ಹೇಳಿದರು.

ಬಿಜೆಪಿ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ನಂತರ ನಮ್ಮ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮುಂಗಾರು ಮಳೆ ವಿಳಂಬಗೊಂಡಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ನೀರಿನ ಅಭಾವ ಎದುರಾಗಿದೆ. ಹಮಾವಾನ ಇಲಾಖೆ ಒದಗಿಸಿರುವ ಮಾಹಿತಿ ಪ್ರಕಾರ ಮುಂದಿನ 7 ದಿನಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಹಾಗೆಯೇ ಆಗಲಿ ಎಂದು ಭರವಂತನ್ನು ಪ್ರಾರ್ಥಿಸೋಣ. ಜಿಲ್ಲೆಯ ಜಲಾಶಯಗಳಲ್ಲಿ ನೀರಿನ ಮಟ್ಟ ಪಾತಾಳ ಕಂಡಿದೆ. ನೀರಿನ ತೊಂದರೆ ಇರುವ ಕೆಡೆಗಳಲ್ಲೆಲ್ಲ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಸುವುದನ್ನು ಬಹಳ ದಿನ ಮಾಡಲಾಗದು. ಹಾಗಾಗಿ, ಮಳೆರಾಯನ ಕೃಪೆಗೆ ಎದುರು ನೋಡದೇ ಬೇರೆ ದಾರಿಯಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!