ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Published : Apr 06, 2024, 11:59 AM IST
ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಾರಾಂಶ

ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೆ, ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ ಎರಡು ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವರು ಟೀಕಿಸಿದರು. ಈಗಿನ ಬಿಜೆಪಿ ಅಭ್ಯರ್ಥಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಹಾಗಾಗಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

ಬೆಳಗಾವಿ(ಏ.06):  25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆಯ ಕರ್ನಾಟಕದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದಾಗಿದೆ. ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅರಭಾವಿ‌ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

JAGADISH SHETTAR: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

ಬಿಜೆಪಿ ಕೊಡುಗೆ ಶೂನ್ಯ

ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೆ, ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ ಎರಡು ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವರು ಟೀಕಿಸಿದರು. ಈಗಿನ ಬಿಜೆಪಿ ಅಭ್ಯರ್ಥಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಹಾಗಾಗಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದರು.
ಸ್ಥಳೀಯ ಸಮಸ್ಯೆಗಳನ್ನು ಸರಿಯಾಗಿ ಅರಿತಿರುವ ಮೃಣಾಲ್‌ ಹೆಬ್ಬಾಳ್ಕರ್, ನಿಮ್ಮ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡಲಿದ್ದಾನೆ. ಇನ್ನೂ ಯುವಕನಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಂತೆ ಬೆಳಗಾವಿ ಕ್ಷೇತ್ರಕ್ಕೆ ಮೃಣಾಲ್‌ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸುವಂತಾಗಬೇಕು ಎಂದರು‌.

ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ-ಶೆಟ್ಟರ್; ಮೊದಲು ಮನೆ ಅಡ್ರೆಸ್ ತೋರಿಸಲಿ ಎಂದ ಹೆಬ್ಬಾಳ್ಕರ್

ಸ್ಥಳೀಯ ಸಮಸ್ಯೆಗಳ ಅರಿವಿದೆ; ಮೃಣಾಲ್‌

ತಾಯಿ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಮನವಿ ಮಾಡಿದರು. ಕಳೆದ 20 ವರ್ಷಗಳಿಂದ ಬಿಜೆಪಿ ಸಂಸದರಿದ್ದರೂ ಜಿಲ್ಲೆಯ ಎಷ್ಟೋ ಗ್ರಾಮಗಳಿಗೆ ಅವರು ಭೇಟಿಯನ್ನೇ ಕೊಟ್ಟಿರಲಿಲ್ಲ. ಒಂದೇ ಒಂದು ಕೈಗಾರಿಕೆಗಳನ್ನು ಸ್ಥಾಪಿಸಿಲ್ಲ. ಇದರಿಂದ ನಮ್ಮ ಜಿಲ್ಲೆಯ ಯುವಕರು ಬೆಂಗಳೂರು, ಪುಣೆ ಕಡೆಗೆ ವಲಸೆ‌ ಹೋಗುವಂತಾಗಿದೆ ಎಂದರು.

ತೆರೆದ ವಾಹನದಲ್ಲಿ ಮೆರವಣಿಗ

ಕೌಜಲಗಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರಿಗೆ ಸ್ಥಳೀಯ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಬಳಿಕ ತೆರೆದ ವಾಹನದಲ್ಲಿ ಸಚಿವರು, ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ನಡೆದ ಸ್ಥಳದವರೆಗೂ ಮೆರವಣಿಗೆ ಮೂಲಕ ಕರೆ ತರಲಾಯಿತು. ಇದೇ ವೇಳೆ ಅನ್ಯ ಪಕ್ಷಗಳ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ