ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಹೊರತು ಬಿಜೆಪಿ, ಈಶ್ವರಪ್ಪ ಅಲ್ಲ: ಎಂಬಿ ಪಾಟೀಲ್ ಕಿಡಿ

By Ravi JanekalFirst Published Feb 9, 2024, 1:32 PM IST
Highlights

ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದ ಕಾಂಗ್ರೆಸ್, ಅವಿರತ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯವ್ರು, ಈಶ್ವರಪ್ಪನವರು ಅಲ್ಲ. ದೇಶದ ಸ್ವಾತಂತ್ರ್ಯಕ್ಕೆ ಯಾವುದೇ ಹೋರಾಟದ ಮಾಡದ ಇವರು ದೇಶ, ರಾಷ್ಟ್ರೀಯತೆ ಬಗ್ಗೆ ಮಾತಾಡ್ತಾರೆ ಎಂದು ಸಚಿವ ಎಂಬಿ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು (ಫೆ.9): ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದ ಕಾಂಗ್ರೆಸ್, ಅವಿರತ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯವ್ರು, ಈಶ್ವರಪ್ಪನವರು ಅಲ್ಲ. ದೇಶದ ಸ್ವಾತಂತ್ರ್ಯಕ್ಕೆ ಯಾವುದೇ ಹೋರಾಟದ ಮಾಡದ ಇವರು ದೇಶ, ರಾಷ್ಟ್ರೀಯತೆ ಬಗ್ಗೆ ಮಾತಾಡ್ತಾರೆ ಎಂದು ಸಚಿವ ಎಂಬಿ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸದ ಡಿಕೆ ಸುರೇಶ್‌ರನ್ನ ಗುಂಡಿಟ್ಟು ಕೊಲ್ಲಬೇಕು ಎಂಬ ಈಶ್ವರಪ್ಪನವರ ಪ್ರಚೋದನಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈಶ್ವರಪ್ಪ ಅನೇಕ ಬಾರಿ ಹೀಗೆ ಮಾತನಾಡಿದ್ದಾರೆ. ಮೈಕ್ ಸಿಕ್ಕರೆ ಏನೇನೋ ಮಾತಾಡ್ತಾರೆ. ಅವೆಲ್ಲವನ್ನ ತೆಗೆದುಬಿಟ್ಟರೆ ಬಹಳ ಅನಾಹುತಕ್ಕೆ ಹೋಗುತ್ತವೆ. ಸಂಸದ ಡಿಕೆಸುರೇಶ್ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರವಾಗುತ್ತೆ ಅಂತಾ ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೆ ಅಂತಾ ಅರ್ಥ ಮಾಡಿಕೊಳ್ಳಿ. ದಕ್ಷಿಣ ರಾಜ್ಯಗಳಿಗೆ ನ್ಯಾಯಯುತವಾಗಿ ಬರಬೇಕಾದ ಅನುದಾನದಲ್ಲಿ ಅನ್ಯಾಯವಾಗ್ತಿದೆ. ನಮಗೆ ಕೊಡಬೇಕಾದ ಅನುದಾನ ಉತ್ತರ ಭಾರತಕ್ಕೆ ಕೊಡ್ತಿರೋದ್ರಿಂದ ನಮಗೆ ಅನ್ಯಾಯ ಆಗ್ತಿದೆ ಎಂದು ನೋವಿನಲ್ಲಿ ಆ ಮಾತನ್ನು ಹೇಳಿದ್ದಾರೆ. ಅವರಿಗೆ ಬಂದಿರೋ ಸಿಟ್ಟನ್ನ ಅವರು ಮಾತುಗಳ ಮೂಲಕ ತೋರಿಸಿದ್ದಾರೆ ಅಷ್ಟೆ. ಅದನ್ನೇ‌ ನಿಜವಾಗಿ ದೇಶ ವಿಭಜನೆ ಮಾಡೋ ಅರ್ಥದಲ್ಲಿ ಹೇಳಿದ್ದಾರೆ ಅಂದರೆ ಹೇಗೆ? ಎಂದು ಪ್ರಶ್ನಿಸಿದರು.

Latest Videos

ಡಿಕೆ ಸುರೇಶ್, ವಿನಯ್ ಕುಲಕರ್ಣಿ ಇಬ್ಬರೂ ದೇಶದ್ರೋಹಿಗಳು; ಖರ್ಗೆಗೆ ತಾಕತ್ತಿದ್ದರೆ ಪಕ್ಷದಿಂದ ಕಿತ್ತುಹಾಕಲಿ: ಈಶ್ವರಪ್ಪ ಸವಾಲು!

ಕಾಂಗ್ರೆಸ್ ದೇಶ ಒಟ್ಟುಗೂಡಿಸುವ ಕೆಲಸ ಮಾಡ್ತಿದೆ. ಸಂವಿಧಾನ ಬದಲಾವಣೆ ಮಾಡೋಕೆ ಬಂದಿರೋದು ಅಂತಾ ಬಿಜೆಪಿ ಸಂಸದ ಅನಂತ ಕುಮಾರ ಹೆಗ್ಡೆ ಹೇಳಿದ್ರು. ಹಾಗಾದರೆ ಇವರ ಉದ್ದೇಶ ಏನು ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಡಿಕೆ ಸುರೇಶ್ ಹೇಳಿಕೆಗೂ ಸಂಸತ್ ನಲ್ಲಿ ಮೋದಿ ಮಾತಾಡೋದು‌ ಸರಿನಾ? ಬಿಜೆಪಿಯವರಿಗೆ ಇಂಥ ಹೇಳಿಕೆ ಸಿಕ್ರೆ ಸಾಕು. ಅದನ್ನೇ ಹಿಡಿದುಕೊಂಡು ರಾಜಕೀಯ ಮಾಡ್ತಾರೆ. ಅದೇ ದಕ್ಷಿಣ ಭಾರತಕ್ಕೆ ಆಗ್ತಿರೋ ಅನ್ಯಾಯ ಹೇಗೆ ಸರಿ ಮಾಡ್ತೇವೆ ಅಂತಾ ಪ್ರಧಾನಿ ಹೇಳಲಿಲ್ಲ. 

ಕಾಂಗ್ರೆಸ್ ಹಿಂದಿನಿಂದಲೂ ದೇಶ ಒಡೆಯುವ ಕೆಲಸ ಮಾಡುತ್ತಿದೆ: ಈಶ್ವರಪ್ಪ ವಾಗ್ದಾಳಿ

click me!