ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Published : Dec 10, 2023, 04:58 PM IST
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

ಸಾರಾಂಶ

ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ: ಸಚಿವ ಎಂ.ಬಿ.ಪಾಟೀಲ   

ವಿಜಯಪುರ(ಡಿ.10):   ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು. ನೋಣವಿನಕೆರೆ ಸ್ವಾಮೀಜಿಯವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ನೀಡಿರುವ ಹೇಳಿಕೆ ಕುರಿತು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರ ಓಲೈಕೆ ಮಾಡ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಆಗಿಬಿಟ್ಟ: ಎಂಬಿ ಪಾಟೀಲ್ 

ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲು ಆಗದು. ಅನೇಕ ಬಾರಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌