ಸಿಎಂ ಆಗಲು 2400 ಕೋಟಿ ಬೇಕು: ಯತ್ನಾಳ್‌ ಹಳೆ ಹೇಳಿಕೆ ಜಟಾಪಟಿ

Published : Jul 07, 2023, 02:00 AM IST
ಸಿಎಂ ಆಗಲು 2400 ಕೋಟಿ ಬೇಕು: ಯತ್ನಾಳ್‌ ಹಳೆ ಹೇಳಿಕೆ ಜಟಾಪಟಿ

ಸಾರಾಂಶ

ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವೇಳೆ ಮುಖ್ಯಮಂತ್ರಿಯಾಗಲು 2,400 ಕೋಟಿ ರು. ನೀಡಬೇಕು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದರು. ಇದರ ಬಗ್ಗೆಯೂ ಚರ್ಚೆಯಾಗಲಿ ಎಂದು ಹೇಳಿದ ಎಂ.ಬಿ.ಪಾಟೀಲ್‌

ವಿಧಾನಸಭೆ(ಜು.07):  ಮುಖ್ಯಮಂತ್ರಿಯಾಗಲು 2,400 ಕೋಟಿ ರು. ಬೇಕು ಎಂಬ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಸಚಿವ ಎಂ.ಬಿ.ಪಾಟೀಲ್‌ ಸದನದಲ್ಲಿ ಪ್ರಸ್ತಾಪಿಸಿದ್ದರಿಂದ ಕ್ರುದ್ಧರಾದ ಯತ್ನಾಳ್‌, ತಾಕತ್ತಿದ್ದರೆ ನನ್ನ ಹೇಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸಿ ಎಂದು ಸವಾಲು ಹಾಕಿದ ಘಟನೆ ನಡೆಯಿತು.

ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣದ ಕುರಿತ ಚರ್ಚೆ ವೇಳೆ ಮಾತನಾಡಿದ ಎಂ.ಬಿ.ಪಾಟೀಲ್‌, ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವೇಳೆ ಮುಖ್ಯಮಂತ್ರಿಯಾಗಲು 2,400 ಕೋಟಿ ರು. ನೀಡಬೇಕು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದರು. ಇದರ ಬಗ್ಗೆಯೂ ಚರ್ಚೆಯಾಗಲಿ ಎಂದು ಹೇಳಿದರು. ಅದರಿಂದ ಸಿಟ್ಟಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಹಳೆಯ ವಿಚಾರವನ್ನೆಲ್ಲ ಈಗ ಹೇಳಬೇಡಿ. ನನ್ನ ಹೇಳಿಕೆಯನ್ನು ತಿರುಚುವುದನ್ನು ಬಿಡಿ. ನಿಮಗೆ ತಾಕತ್ತಿದ್ದರೆ ನನ್ನ ಹೇಳಿಕೆ ಬಗ್ಗೆ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದರು.

News Hour: ವರ್ಗಾವಣೆ ದಂಧೆಗೆ ಎಚ್‌ಡಿಕೆ ಪೆನ್‌ಡ್ರೈವ್‌ ಸಾಕ್ಷ್ಯ, ಸಿದ್ದು ಸರ್ಕಾರಕ್ಕೆ ಸವಾಲಾದ 'ದಳಪತಿ'

ಆಗ ಮಧ್ಯಪ್ರವೇಶಿಸಿದ ಸಚಿವ ಬೈರತಿ ಸುರೇಶ್‌, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಸಲು ಕಾರಣ ಯಾರು? ಯಡಿಯೂರಪ್ಪ ಬಗ್ಗೆ ಏನೆಲ್ಲ ಮಾತನಾಡಿದ್ದೀರಿ ಎಂದಾಗ ವಿಷಯಾಂತರವಾಗಿ ಈ ವಿಚಾರ ಅಲ್ಲಿಗೆ ಮುಗಿಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್